Asianet Suvarna News Asianet Suvarna News

ಸೋಂಕಿತರೊಂದಿಗೆ ನೇರ ಚರ್ಚೆ : ಭೇಟಿ ವೇಳೆ ಮಾಹಿತಿ ಪಡೆದ ಸೋಮಶೇಖರ್

  • ವರುಣಾ ವಿಧಾನಸಭಾ ಕ್ಷೇತ್ರದ ವರಕೂಡು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಚಿವರ ಭೇಟಿ
  • ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಟಿ. ಸೋಮಶೇಖರ್ ಭೇಟಿ
  • ಪುರುಷ ಹಾಗೂ ಮಹಿಳಾ ಕೋವಿಡ್ ಸೋಂಕಿತರ ಬ್ಲಾಕ್ ಗಳಿಗೆ ಭೇಟಿ ನೀಡಿ ಅವರ ಜೊತೆ ಚರ್ಚೆ
Minister St somashekar Visits Mysuru varakodu PHC snr
Author
Bengaluru, First Published May 30, 2021, 10:16 AM IST

ಮೈಸೂರು (ಮೇ.30): ಮೈಸೂರಿನ ವರುಣಾ ವಿಧಾನಸಭಾ ಕ್ಷೇತ್ರದ ವರಕೂಡು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಟಿ. ಸೋಮಶೇಖರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಪುರುಷ ಹಾಗೂ ಮಹಿಳಾ ಕೋವಿಡ್ ಸೋಂಕಿತರ ಬ್ಲಾಕ್ ಗಳಿಗೆ ಭೇಟಿ ನೀಡಿ ಅವರ ಜೊತೆ ಚರ್ಚೆ ನಡೆಸಿದ ಸಚಿವರು, ಔಷಧ ಊಟೋಪಚಾರ ಸೇರಿದಂತೆ ಚಿಕಿತ್ಸೆಯ ವ್ಯವಸ್ಥೆಗಳ ಬಗ್ಗೆ ಖುದ್ದು ಸೋಂಕಿತರಿಂದ ಮಾಹಿತಿಯನ್ನು ಪಡೆದುಕೊಂಡರು. ಅಲ್ಲದೆ, ಯಾವುದೇ ಕಾರಣಕ್ಕೂ ಭಯಪಡುವುದು ಬೇಡ. ಧೈರ್ಯದಿಂದ ಎದುರಿಸಿದರೆ ರೋಗವನ್ನು ಅರ್ಧವಾಸಿ ಮಾಡಿಕೊಂಡಂತೆ ಆಗಲಿದೆ. ಸರ್ಕಾರ ಸಹ ನಿಮ್ಮ ಜತೆಗಿದೆ ಎಂಬ ಅಭಯವನ್ನು ಸಚಿವರು ನೀಡಿದರು.

ಮೈಸೂರಿನ 35 ಗ್ರಾಮಗಳನ್ನು ಮುಟ್ಟದ ಕೊರೋನಾ : ಮುನ್ನೆಚ್ಚರಿಕೆಯೇ ಕಾರಣ .

ಇದೇ ವೇಳೆ ಸೋಂಕಿತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಲು ಆರೋಗ್ಯಾಧಿಕಾರಿಗಳಿಗೆ ಸಚಿವರಾದ ಸೋಮಶೇಖರ್ ಅವರು ಸೂಚಿಸಿದರು. ಅಲ್ಲದೆ ಯಾವುದೇ ರೀತಿಯ ಕೊರತೆಗಳಿದ್ದರೆ ತಮ್ಮ ಗಮನಕ್ಕೆ ತರುವಂತೆ ತಿಳಿಸಿದರು. 

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರಾದ ಸೋಮಶೇಖರ್ ಅವರು, ಆಸ್ಪತ್ರೆಯಲ್ಲಿ ನಿರ್ವಹಣೆ ಬಹಳ ಅಚ್ಚುಕಟ್ಟಾಗಿದೆ. ಪುರುಷರು ಮಹಿಳೆಯರು ಸೇರಿದಂತೆ ಒಟ್ಟು 4 ಕಡೆ ಸೋಂಕಿತರಿಗೆ ವ್ಯವಸ್ಥೆ ಮಾಡಲಾಗಿದೆ. ಎಲ್ಲ ಕಡೆಯೂ ಖುದ್ದು ಭೇಟಿ ಕೊಟ್ಟು ಅವರೊಂದಿಗೆ ಚರ್ಚೆ ನಡೆಸಿದ್ದೇನೆ. ಊಟದ ವ್ಯವಸ್ಥೆ, ಚಿಕಿತ್ಸೆ ವ್ಯವಸ್ಥೆ ಬಗ್ಗೆ ಕೇಳಿದ್ದೇನೆ. ಅವರಿಂದಲೂ ಸಹ ಉತ್ತಮವಾದ ಪ್ರತಿಕ್ರಿಯೆ ಬಂದಿದೆ ಎಂದು ತಿಳಿಸಿದರು.

ಮನೋರಂಜನೆಗೂ ಕೊರತೆ ಇಲ್ಲ: ಎಸ್ ಟಿ ಎಸ್

ಔಷಧ ವಿತರಣೆ, ಆಕ್ಸಿಜನ್ ವ್ಯವಸ್ಥೆ ಸೇರಿದಂತೆ ಎಲ್ಲವನ್ನು ನೋಡಲ್ ಅಧಿಕಾರಿಗಳು ಉತ್ತಮವಾಗಿ ನೋಡಿಕೊಳ್ಳುತ್ತಿದ್ದಾರೆ. ಇನ್ನು ಸಂಜೆ ವೇಳೆ ವಾಯುವಿಹಾರ ಮಾಡುವುದು, ಡಾನ್ಸ್ ಇತ್ಯಾದಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಮನರಂಜನಾತ್ಮಕವಾಗಿ ಸಹ ಇಲ್ಲಿ ಸದಾ ಚಟುವಟಿಕೆಯಿಂದ ಇದ್ದಾರೆ. ಸೋಂಕಿತ ಮಹಿಳೆಯರು ತಾವು ಖುಷಿಯಿಂದ ಇರುವುದಾಗಿ ಹೇಳಿಕೊಂಡಿದ್ದಾರೆ ಎಂದು ಸಚಿವರು ತಿಳಿಸಿದರು.

ಸಂಸದರು, ಆಕ್ಸಿಜನ್ ಮತ್ತು ಔಷಧ ಟಾಸ್ಕ್ ಪೋರ್ಸ್ ಸಮಿತಿ ಅಧ್ಯಕ್ಷರಾದ ಪ್ರತಾಪ್ ಸಿಂಹ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

Follow Us:
Download App:
  • android
  • ios