ಮಾಜಿ ಸಿಎಂ ಸಿದ್ದರಾಮಯ್ಯ ಹಗಲು ಹೊತ್ತುನಿದ್ದೆ ಮಾಡುವಾಗ ಕನಸು ಕಂಡಿದ್ದಾರೆ. ಅವರು ಹಗಲು ಹೊತ್ತಲ್ಲೇ ನಿದ್ದೇ ಮಾಡುವುದು ಜಾಸ್ತಿ ಎಂದು ಮುಖಂಡರೋರ್ವರು ಹೇಳಿದ್ದಾರೆ
ಮಡಿಕೇರಿ (ಅ.02): ಮಾಜಿ ಸಿಎಂ ಸಿದ್ದರಾಮಯ್ಯ ರಾತ್ರಿಗಿಂತ ಹಗಲು ನಿದ್ದೆ ಮಾಡುವುದೇ ಜಾಸ್ತಿ. ಸಿಎಂ ಬಿಎಸ್ವೈ ಬದಲಾಗಲಿದ್ದಾರೆ ಎನ್ನುವ ಬಗ್ಗೆ ಅವರಿಗೆ ಅದ್ಯಾವಾಗ ಕನಸು ಬಿದ್ದಿತ್ತೋ ಗೊತ್ತಿಲ್ಲ ಎಂದು ಸಿದ್ದರಾಮಯ್ಯ ಹೇಳಿಕೆಗೆ ಸಚಿವ ವಿ.ಸೋಮಣ್ಣ ತಿರುಗೇಟು ನೀಡಿದ್ದಾರೆ.
Add Asianetnews Kannada as a Preferred Source

ಭಾಗಮಂಡಲ ಹಾಗೂ ತಲಕಾವೇರಿಗೆ ಪತ್ನಿ ಶೈಲಜಾ ಅವರೊಂದಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸೋಮಣ್ಣ ಸುದ್ದಿಗಾರರೊಂದಿಗೆ ಮಾತನಾಡಿದರು.
ತಾರಕಕ್ಕೇರಿದ ಸಿದ್ದರಾಮಯ್ಯ-ಅಶೋಕ್ ಮಾತಿನ ಸಮರ ...
‘ಯಡಿಯೂರಪ್ಪ ಅವರೇ ಮುಂದೆಯೂ ಮುಖ್ಯಮಂತ್ರಿ ಆಗಿರುತ್ತಾರೆ. ಸಿಎಂ ಸ್ಥಾನ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಹಗಲು ಕನಸನ್ನು ಕಾಣುತ್ತಿದ್ದಾರೆ.
ಪಕ್ಷ, ಹೈಕಮಾಂಡ್ ಹಾಗೂ ಯಡಿಯೂರಪ್ಪ ತಮ್ಮ ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಣೆ ಮಾಡುತ್ತಿದ್ದಾರೆ’ ಎಂದರು.
