ಮೆಟ್ರೋದಿಂದ ಕನ್ನಡ ನಿರ್ಲಕ್ಷ್ಯ: ಕ್ರಮಕ್ಕೆ ಸಚಿವ ಸುನಿಲ್ ಸೂಚನೆ
* ಕನ್ನಡ ಭಾಷೆಯ ಕಡೆಗಣನೆಗೆ ತೀವ್ರ ಟೀಕೆ
* ಕಾರಣರಾದ ಅಧಿಕಾರಿಗಳ ಮೇಲೆ ಕೂಡಲೇ ಶಿಸ್ತು ಕ್ರಮ
* ಕನ್ನಡ ಅಧಿಕೃತ ಆಡಳಿತ ಭಾಷೆಯೆಂದು ಘೋಷಿಸಿದ್ದರೂ ಅಧಿಕಾರಿಗಳ ಕಡೆಗಣನೆ
ಬೆಂಗಳೂರು(ಸೆ.02): ನಾಯಂಡಹಳ್ಳಿ-ಕೆಂಗೇರಿ ನಡುವಿನ ಮೆಟ್ರೋ ರೈಲು ಸಂಚಾರದ ಉದ್ಘಾಟನಾ ಸಮಾರಂಭದಲ್ಲಿ ಕನ್ನಡ ಭಾಷೆಯ ಕಡೆಗಣನೆ ಮಾಡಿ ತೀವ್ರ ಟೀಕೆಗೆ ಗುರಿಯಾಗಿರುವ ಬಿಎಂಆರ್ಸಿಎಲ್ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಸೂಚಿಸಿದ್ದಾರೆ.
ಬುಧವಾರ ಈ ಕುರಿತು ಮೆಟ್ರೋ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿರುವ ಅವರು, ಕನ್ನಡ ಅಧಿಕೃತ ಆಡಳಿತ ಭಾಷೆಯೆಂದು ಘೋಷಿಸಿದ್ದರೂ ಅಧಿಕಾರಿಗಳು ಕಡೆಗಣಿಸಿರುವುದನ್ನು ಸಹಿಸುವುದಿಲ್ಲ. ಸರ್ಕಾರ ಇದನ್ನುಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿಸಿದ್ದಾರೆ.
ಕೆಂಗೇರಿ ಮೆಟ್ರೋ ಆರಂಭ: ವೇದಿಕೆಯಲ್ಲಿ ಕನ್ನಡವೇ ಮಾಯ!
ಇದಕ್ಕೆ ಕಾರಣರಾದ ಅಧಿಕಾರಿಗಳ ಮೇಲೆ ಕೂಡಲೇ ಶಿಸ್ತು ಕ್ರಮ ಕೈಗೊಳ್ಳಬೇಕು. ಜೊತೆಗೆ ಇದಕ್ಕೆ ಸೂಕ್ತ ವಿವರಣೆ ನೀಡಬೇಕು ಎಂದು ಪತ್ರದಲ್ಲಿ ಸಚಿವ ವಿ. ಸುನಿಲ್ ಕುಮಾರ್ ಎಚ್ಚರಿಸಿದ್ದಾರೆ.