Asianet Suvarna News Asianet Suvarna News

ವಕ್ಫ್‌, ಮುಜರಾಯಿ ಆಸ್ತಿ ದೇವರದ್ದು, ಯಾರಪ್ಪನದ್ದಲ್ಲ: ಸಚಿವ ಜಮೀರ್‌ ಅಹಮದ್

ವಕ್ಫ್‌ ಬೋರ್ಡ್ ಅಸ್ತಿ 1.12 ಸಾವಿರ ಎಕರೆ ಇದೆ, ಅದರಲ್ಲಿ 84 ಸಾವಿರ ಎಕರೆ ಭೂಮಿ ತಾಂತ್ರಿಕ ಸಮಸ್ಯೆಯಿಂದ ಕೂಡಿದೆ. ಮುಜರಾಯಿ ಇಲಾಖೆಗೆ ಸೇರಿದ 680 ಎಕರೆ ಜಾಗವನ್ನು ಒತ್ತುವರಿ ಮಾಡಲಾಗಿದೆ. ಹೀಗಿದ್ದರೂ ಎರಡು ಬಾರಿ ಸಚಿವರಾದ ಸಿ.ಟಿ. ರವಿ ಸರಿಪಡಿಸದೆ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಮುಜರಾಯಿ ಆಸ್ತಿಯ ಸಮಸ್ಯೆಯನ್ನು ನಾನೇ ಸರಿಪಡಿಸುವೆ: ಸಚಿವ ಜಮೀರ್‌ ಅಹಮದ್ ಖಾನ್ 

Minister Zameer Ahmed Khan React to BJP MLC CT Ravi Statement grg
Author
First Published Oct 11, 2024, 12:50 PM IST | Last Updated Oct 11, 2024, 12:50 PM IST

ಕೂಡ್ಲಿಗಿ(ಅ.11):  ವಕ್ಫ್‌ ಅಸ್ತಿ ಸರ್ಕಾರದಲ್ಲಿ, ದಾನಿಗಳು ನೀಡಿದ ಅಸ್ತಿ ಅಷ್ಟೆ. ಬದಲಾಗಿ ವಕ್ಫ್‌ ಮತ್ತು ಮುಜರಾಯಿ ಇಲಾಖೆಯ ಆಸ್ತಿ, ದೇವರ ಅಸ್ತಿಯಾಗಿದೆಯೇ ಹೊರತು ಯಾರಪ್ಪನ ಅಸ್ತಿಯಲ್ಲ ಎಂಬುದನ್ನು ಬಿಜೆಪಿ ನಾಯಕರು ಅರ್ಥ ಮಾಡಿಕೊಳ್ಳಬೇಕು ಎಂದು ಸಚಿವ ಜಮೀರ್‌ ಅಹಮದ್ ಖಾನ್ ಮಾಜಿ ಸಚಿವ ಸಿ.ಟಿ. ರವಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು. 

ಅವರು ಗುರುವಾರ ಕುಮತಿ ಗ್ರಾಮದಲ್ಲಿ ಮೂವರು ಬಾಲಕರು ನೀರಿನಲ್ಲಿ ಮುಳಗಿ ಮೃತಪಟ್ಟ ಹಿನ್ನೆಲೆಯಲ್ಲಿ ಕುಟುಂಬದವರಿಗೆ ಸಾಂತ್ವನ ಹೇಳಲು ಅಗಮಿಸಿದ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು. ವಕ್ಫ್‌ ಬೋರ್ಡ್ ಅಸ್ತಿ 1.12 ಸಾವಿರ ಎಕರೆ ಇದೆ, ಅದರಲ್ಲಿ 84 ಸಾವಿರ ಎಕರೆ ಭೂಮಿ ತಾಂತ್ರಿಕ ಸಮಸ್ಯೆಯಿಂದ ಕೂಡಿದೆ. ಮುಜರಾಯಿ ಇಲಾಖೆಗೆ ಸೇರಿದ 680 ಎಕರೆ ಜಾಗವನ್ನು ಒತ್ತುವರಿ ಮಾಡಲಾಗಿದೆ. ಹೀಗಿದ್ದರೂ ಎರಡು ಬಾರಿ ಸಚಿವರಾದ ಸಿ.ಟಿ. ರವಿ ಸರಿಪಡಿಸದೆ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಮುಜರಾಯಿ ಆಸ್ತಿಯ ಸಮಸ್ಯೆಯನ್ನು ನಾನೇ ಸರಿಪಡಿಸುವೆ ಎಂದರು. 

'ಮೊದಲು ಹಿಂದೂಗಳ ಜಾಗದಲ್ಲಿ ಗೋರಿ ಕಟ್ತಾರೆ, ಬಳಿಕ ನಮ್ದು ಅಂತಾರೆ': ಚಕ್ರವರ್ತಿ ಸೂಲಿಬೆಲೆ

ಈ ಹಿಂದೆ ಬಸನಗೌಡ ಯತ್ನಾಳ್‌ ಸಹ ಸಿ.ಟಿ. ರವಿ ಅವರ ರೀತಿಯಲ್ಲಿ ಮಾತನಾಡಿದ್ದರು. ಅವರಿಗೆ ಸೂಕ್ತ ಉತ್ತರ ನೀಡುವೆ ಎಂದರು. ಮುಡಾ ಕೇಸನ್ನೇ ಮುಂದಿಟ್ಟುಕೊಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಹೇಳಿಕೆ ನೀಡುತ್ತಾ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಗಲು ಕನಸು ಕಾಣುತ್ತಾರೆ. ರಾಜ್ಯದಲ್ಲಿ ಬಿಜೆಪಿ ನಾಯಕರು ಸ್ಥಿತಿ ಮನೆಯೊಂದು ಮೂರು ಬಾಗಿಲು ಎಂಬಂತೆ ಆಗಿದೆ. ಆದರೆ, ಕಾಂಗ್ರೆಸ್‌ನಲ್ಲಿ ಒಂದೆ ಮನೆ, ಅದೂ ಅರಮನೆ ಎಂದರು. 

ಸಚಿವರು ಒಂದೆಡೆ ಸೇರಿ ಊಟ ಮಾಡೋದು ತಪ್ಪಾ?: 

ಸಚಿವರೆಲ್ಲರೂ ಒಂದು ಕಡೆ ಸೇರಿ ಊಟ ಮಾಡೋದು ತಪ್ಪಾ? ಮೈಸೂರಿಗೆ ಸತೀಶ್ ಜಾರಕಿಹೊಳಿ ಹೋಗಿದ್ದಾರೆ. ಆ ವೇಳೆ ಸಚಿವ ಮಹಾದೇವಪ್ಪ ಜತೆ ಊಟ ಮಾಡಿದ್ದಾರೆ ಅಷ್ಟೆ, ಇದಕ್ಕೆ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದರು. ನಾನು ಮೊನ್ನೆ ವಿಜಯಪುರದಲ್ಲಿ, ಶಿವಾನಂದ ಪಾಟೀಲ್ ಸೇರಿದಂತೆ ಹಲವು ಶಾಸಕರನ್ನು ಭೇಟಿ ಮಾಡಿದ್ದೀನಿ. ಹಾಗಂತ ನಾನು ಇನ್ನೊಂದು ಬಣ ಕಳ್ಕೊಂಡಿದೀನಿ ಅಂತ ಅರ್ಥಾನಾ ಎಂದು ಪ್ರಶ್ನಿಸಿದರು. 

ರಾಜ್ಯದಲ್ಲೇ ವಿಜಯಪುರದಲ್ಲಿದೆ ಹೆಚ್ಚು ವಕ್ಫ್‌ ಆಸ್ತಿ: ಸಚಿವ ಜಮೀರ್‌ ಅಹ್ಮದ್

ಜಾರಕಿಹೊಳಿ ಅವರೇ ಸದ್ಯ ಮುಖ್ಯಮಂತ್ರಿ ಖುರ್ಚಿ ಖಾಲಿ ಇಲ್ಲ ಅಂತ ಹೇಳಿದ್ದಾರೆ. ಸಿದ್ದರಾಮಯ್ಯ ಅವರು 5 ವರ್ಷಗಳ ಅಂತಾನೇ ಹೇಳಿದ್ದಾರೆ. ಬಿಜೆಪಿಯವರಿಗೆ ಸಿಎಂ ಸಿದ್ದರಾಮಯ್ಯ ಅವರ ಪಾಪ್ಯೂಲಾರಿಟಿ ಸಹಿಸಿಕೊಳ್ಳೋಕೆ ಆಗ್ತಿಲ್ಲ ಎಂದು ಟೀಕಿಸಿದರು. ಕಾಲ ಸಿಎಂ ಬದಲಾವಣೆ, ದಲಿತ ಸಿಎಂ ವಿಚಾರದಲ್ಲಿ ಮಾತನಾಡಬೇಡಿ ಅಂತ ನಮಗೆ ಯಾರೂ ನಿರ್ದೇಶನ ಕೊಟ್ಟಿಲ್ಲ, ಬಹುಮತ ಇರುವ ಸದೃಢ ಸರ್ಕಾರ ನಮ್ಮದು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ನೇತೃತ್ವದಲ್ಲಿ ಉತ್ತಮ ಸರ್ಕಾರ ನಡೆಯುತ್ತಿದೆ. ಎಲ್ಲ ಶಾಸಕರು ಅಭಿವೃದ್ಧಿ ಕೆಲಸದಲ್ಲಿ ತಲ್ಲೀನರಾಗಿರಿದ್ದೇವೆ. ಯಾವುದೇ ಗೊಂದಲಗಳು ಇಲ್ಲ ಎಂದರು. 

ಶಾಸಕ ಡಾ.ಎನ್.ಟಿ. ಶ್ರೀನಿವಾಸ್, ಜಿಂಕಲ್ ನಾಗಮಣಿ, ಪಪಂ ಅಧ್ಯಕ್ಷಕಾವಲ್ಲಿ ಶಿವಪ್ಪನಾಯಕ, ವಿಶಾಲಾಕಿ ಲಕ್ಷಿ ರಾಜಣ್ಣ, ಬಿಟಿ ಗುದ್ದಿ ದುರುಗೇಶ್, ಗುರುಸಿದ್ದನಗೌಡ, ಬೊಮ್ಮಣ್ಣ, ಗಂಗಣ್ಣ ಜಿ. ಓಬಣ್ಣ ಇದ್ದರು.

Latest Videos
Follow Us:
Download App:
  • android
  • ios