ಮಂಗಳೂರು: ಮಸೀದಿ ಮೇಲೆ ಬಾಟಲಿ ಎಸೆದ ದುಷ್ಕರ್ಮಿಗಳು
ಮಸೀದಿಗೆ ಸೋಡಾ ಬಾಟಲಿ ಎಸೆದ ದುಷ್ಕರ್ಮಿಗಳು| ಮಂಗಳೂರು ನಗರದಲ್ಲಿ ನಡೆದ ಘಟನೆ| ಪಂಪ್ವೆಲ್ನ ‘ಮಸ್ಜಿದುತ್ತಖ್ವಾದ’ ಎಡಭಾಗದಿಂದ ಸೋಡಾ ಬಾಟಲಿ ಎಸೆದು ಪರಾರಿಯಾದ ದುಷ್ಕರ್ಮಿಗಳು| ಈ ಸಂಬಂಧ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು|
ಮಂಗಳೂರು(ಆ.24): ರಾಷ್ಟ್ರೀಯ ಹೆದ್ದಾರಿ 66ರ ಸಮೀಪದ ಪಂಪ್ವೆಲ್ನ ಮಸೀದಿಗೆ ದುಷ್ಕರ್ಮಿಗಳು ಸೋಡಾ ಬಾಟಲಿ ಎಸೆದ ಘಟನೆ ಶನಿವಾರ ಬೆಳಕಿಗೆ ಬಂದಿದೆ. ಪಂಪ್ವೆಲ್ನ ‘ಮಸ್ಜಿದುತ್ತಖ್ವಾದ’ ಎಡಭಾಗದಿಂದ ದುಷ್ಕರ್ಮಿಗಳು ಮುಂಜಾನೆ ಸುಮಾರು 3:40ರ ವೇಳೆಗೆ ಸೋಡಾ ಬಾಟಲಿ ಎಸೆದು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯಿಂದ ಮಸೀದಿಯ ಕಿಟಕಿಯ ಗಾಜಿಗೆ ಹಾನಿಯಾಗಿದೆ. ಮಸೀದಿಯ ಕಾವಲುಗಾರರ ಕಣ್ತಪ್ಪಿಸಿ ಈ ಕೃತ್ಯ ಎಸಗಲಾಗಿದೆ. ಕಾವಲುಗಾರರು ಬೆಳಗ್ಗೆ ಮಸೀದಿಯ ಮಹಡಿ ಹತ್ತಿದಾಗಲೇ ಕೃತ್ಯ ಬೆಳಕಿಗೆ ಬಂದಿದೆ. ತಕ್ಷಣ ಮಸೀದಿಯ ಪದಾಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸುಳ್ಯ: ಕೋಮಾದಲ್ಲಿದ್ದ ವೃದ್ಧೆ ದಿಢೀರ್ ಚೇತರಿಕೆ, ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಿದ್ದ ಕುಟುಂಬಸ್ಥರು..!
ಮಂಗಳೂರು ದಕ್ಷಿಣ ಉಪವಿಭಾಗದ ಎಸಿಪಿ ಕೋದಂಡರಾಮ ನೇತೃತ್ವದ ಪೊಲೀಸರು ಮಸೀದಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಕುರಿತು ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.