ಗೋಮಾಂಸ ಸಾಗಾಟ ಶಂಕೆ: ವಾಹನಕ್ಕೆ ಬೆಂಕಿ ಇಟ್ಟ ದುಷ್ಕರ್ಮಿಗಳು
ಬೆಳಗಾವಿಯಿಂದ ಗೋವಾಕ್ಕೆ ಅನಧಿಕೃತವಾಗಿ ಗೋಮಾಂಸ ಸಾಗಾಟ ಶಂಕೆ| ವಾಹನ ಕಾಯುತ್ತ ನಿಂತಿದ್ದ ಕೆಲ ಹಿಂದೂ ಸಂಘಟನೆಗಳ ಕಾರ್ಯಕರ್ತರು| ವಾಹನ ತಡೆದು ಬೆಂಕಿ ಹಚ್ಚಿದ ದುಷ್ಕರ್ಮಿಗಳು|
ಬೆಳಗಾವಿ(ಜೂ.07): ನಗರದಿಂದ ಗೋವಾ ರಾಜ್ಯಕ್ಕೆ ಅಕ್ರಮವಾಗಿ ಗೋಮಾಂಸ ಸಾಗಾಣಿಕೆ ಮಾಡಲಾಗುತ್ತಿದೆ ಎಂದು ಶಂಕೆ ವ್ಯಕ್ತಪಡಿಸಿ ವಾಹನವೊಂದಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ಶನಿವಾರ ಬೆಳಗಿನ ಜಾವ ಬೆಳಗಾವಿಯ ಕರ್ಲೆ- ಬೆಳವಟ್ಟಿ ರಸ್ತೆಯ ಮೇಲೆ ಸಂಭವಿಸಿದೆ.
ಬೆಳಗಾವಿಯಿಂದ ಗೋವಾಕ್ಕೆ ಅನಧಿಕೃತವಾಗಿ ಗೋಮಾಂಸ ಸಾಗಿಸಲಾಗುತ್ತಿದೆ ಎಂದು ಕೆಲ ಹಿಂದೂ ಸಂಘಟನೆಗಳ ಕಾರ್ಯಕರ್ತರು ವಾಹನ ಕಾಯುತ್ತ ನಿಂತಿದ್ದರು. ವಾಹನವನ್ನು ತಡೆದು ಬೆಂಕಿ ಹಚ್ಚಿದ್ದಾರೆ. ವಾಹನದಲ್ಲಿದ್ದವರು ಓಡಿ ಹೋಗಿದ್ದಾರೆ.
ಬೆಳಗಾವಿ: 'ಕೊರೋನಾ ಕಾಟದ ಮಧ್ಯೆಯೇ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಸಿದ್ಧರಾಗಿ'
ವಾಹನಕ್ಕೆ ಬೆಂಕಿ ಹಚ್ಚಿರುವ ಘಟನೆಯಿಂದ ಭಯದ ವಾತಾವರಣ ನಿರ್ಮಾಣವಾಗಿದೆ. ಈ ವಾಹನ ನಿತ್ಯ ಗೋವಾಕ್ಕೆ ತೆರಳುತಿತ್ತು ಎನ್ನಲಾಗಿದೆ. ಈ ಕುರಿತು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.