* ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಭೈರುಂಬೆ ಗ್ರಾಮದಲ್ಲಿ ನಡೆದ ಘಟನೆ* ಹಿಂಡಿಯ ಜತೆ ವಿಷ ಸೇರಿಸಿ ಆಕಳಿಗೆ ನೀಡಿದ ದುಷ್ಕರ್ಮಿಗಳು* ಈ ಸಂಬಂಧ ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲು
ಶಿರಸಿ(ಆ.25): ಮೇಯಲು ಬಿಟ್ಟ ಮೂರು ಆಕಳನ್ನು ದುಷ್ಕರ್ಮಿಗಳು ವಿಷ ಹಾಕಿ ಕೊಂದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಭೈರುಂಬೆ ಗ್ರಾಮ ಪಂಚಾಯಿತಿಯ ಅರಸಾಪುರ ಬೆಟ್ಟದಲ್ಲಿ ಮಂಗಳವಾರ ನಡೆದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಇವು ಇಲ್ಲಿಯ ಸುರೇಶ ಚಲುವಾದಿ ಅವರಿಗೆ ಸೇರಿದ ಆಕಳುಗಳಾಗಿವೆ. ಯಾವ ಕಾರಣಕ್ಕಾಗಿ ದುರುಳರು ಆಕಳನ್ನು ಕೊಂದಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ. ಹಿಂಡಿಯ ಜತೆ ವಿಷ ಸೇರಿಸಿ ಆಕಳಿಗೆ ನೀಡಿದ ಕಾರಣ ಪಶುಗಳು ತಿಂದು ಅಸು ನೀಗಿವೆ. ಈ ಪೈಕಿ ಒಂದು ಆಕಳು 8 ತಿಂಗಳ ಗರ್ಭದಲ್ಲಿ ಇತ್ತು ಎಂದು ಪಶು ವೈದ್ಯಕೀಯ ಪರೀಕ್ಷೆಯಿಂದ ತಿಳಿದುಬಂದಿದೆ.
ಶಿರಸಿಯ ದಿನೇಶ ಹೆಗಡೆಗೆ ನಾಸಾ ಪ್ಯೂಚರ್ ಇನ್ವೆಸ್ಟಿಗೇಟರ್ ಪ್ರಶಸ್ತಿ
ಸ್ಥಳಕ್ಕೆ ಆಗಮಿಸಿದ ಭೈರುಂಬೆ ಗ್ರಾಮ ಪಂಚಾಯಿತಿ ಅಧ್ಯಕ್ಷ ರಘು ನಾಯ್ಕ, ತಕ್ಷಣವೇ ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಬಂಧಿಸುವಂತೆ ಆಗ್ರಹಿಸಿದ್ದಾರೆ. ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
