ಮಳೆ ಹಾನಿ ಕೇವಲ ಕೊಡಗಿಗೆ ಮಾತ್ರ ಸೀಮಿತವಾಗಿಲ್ಲ. ಪಕ್ಕದ ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಭೂಕುಸಿತ, ಬೆಳೆ ಹಾನಿಯಾಗುತ್ತಲೇ ಇದೆ. ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಸಿಎಂ ಕುಮಾರಸ್ವಾಮಿಗೆ ಮನವಿ ಮಾಡಿಕೊಳ್ಳುತ್ತಿರುವ ದೃಶ್ಯ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಚಿಕ್ಕಮಗಳೂರು[ಆ.24] ಸಿಎಂ ಕುಮಾರಸ್ವಾಮಿಗೆ ಶಾಸಕ ಕುಮಾರಸ್ವಾಮಿ ಮನವಿ ಮಾಡಿಕೊಂಡಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಜಿಲ್ಲೆಗೆ ಅಗಮಿಸುವಂತೆ ಸಾಮಾಜಿಕ ಜಾಲತಾಣದಲ್ಲಿ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಮನವಿ ಮಾಡಿಕೊಂಡಿದ್ದಾರೆ.

Add Asianetnews Kannada as a Preferred SourcegooglePreferred

ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಕೈ ಮುಗಿದು ಮನವಿ ಮಾಡಿಕೊಳ್ಳುತ್ತಿರುವುದು ಇದೀಗ ವೈರಲ್ ಆಗುತ್ತದೆ. ಮೂಡಿಗೆರೆ ತಾಲೂಕಿನಲ್ಲಿ ಗ್ರಾಮ ವಾಸ್ತವ್ಯಹೂಡಿ ಪರಿಸ್ಥಿತಿ ಅವಲೋಕಿಸಬೇಕು ಎಂದು ಕೋರಿದ್ದಾರೆ.

ಮಲೆನಾಡಿನಲ್ಲಿ ಮಳೆಯಿಂದ ಸಾಕಷ್ಟು ಅವಾಂತರ ಸೃಷ್ಟಿಯಾಗಿದ್ದು, ಕೊಡಗಿನಲ್ಲಿ ಭೀಕರ ಪ್ರವಾಹದ ಬಳಿಕ ಚಿಕ್ಕಮಗಳೂರಿನ ಕಾಫಿ ತೋಟದಲ್ಲಿ ಭೂ ಕುಸಿತ ಮುಂದುವರೆದಿದೆ. ಕೊಪ್ಪ ತಾಲೂಕಿನ ಭೂತನಕಾಡು ಗ್ರಾಮದ ಮೈಸೂರು ಪ್ಲಾಂಟೇಷನ್’ನಲ್ಲಿ ಈ ಘಟನೆ ಸಂಭವಿಸಿದ್ದು, ಸುಮಾರು ಒಂದು ಎಕರೆ ಇರುವ ತೋಟದಲ್ಲಿ 40 ಅಡಿ ಆಳಕ್ಕೆ ಭೂಮಿ ಕುಸಿದಿದ್ದು ವರದಿಯಾಗಿತ್ತು.