ಬೆಳಿಗ್ಗೆಯಿಂದ ಬಾಗಲಕೋಟೆ ನಗರದ ವಿವಿಧೆಡೆ ಸಂಚರಿಸುತ್ತಿರೋ ಸಂಚಾರಿ ಅಂಚೆ ಕಚೇರಿ| ಗ್ರಾಹಕರು ಯಾವುದೇ ಬ್ಯಾಂಕ್‌ನ ಅಕೌಂಟ್ ಇದ್ರೂ ಹಣ ಸಿಗಲಿದೆ| ಎಇಪಿಎಸ್ ಮುಖಾಂತರ ಅಂಚೆ ಕಚೇರಿ ಸಿಬ್ಬಂದಿ ಗ್ರಾಹಕರಿಗೆ ಹಣ|

ಬಾಗಲಕೋಟೆ(ಏ.11): ಮಹಾಮಾರಿ ಕೊರೋನಾ ವೈರಸ್‌ ಹಿನ್ನೆಲೆಯಲ್ಲಿ ಜನರು ಮನೆ ಬಿಟ್ಟು ಹೊರಗಡೆ ಬರದಿರಲಿ ಎಂಬ ಉದ್ದೇಶದಿಂದ ದೇಶಾದ್ಯಂತ ಲಾಕ್‌ಡೌನ್ ಜಾರಿಯಲ್ಲಿದೆ. ಈ ಸಂದರ್ಭದಲ್ಲಿ ಗ್ರಾಹಕರ ಅನುಕೂಲಕ್ಕಾಗಿ ಸಂಚಾರಿ ಅಂಚೆ ಕಚೇರಿ ಆರಂಭವಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಿಬ್ಬಂದಿ ಸಹಿತ ಇರುವ ಸಂಚಾರಿ ಅಂಚೆ ಕಚೇರಿ ವಾಹನ ನಗರದ ಓಣಿ ಓಣಿಗೂ ಸಂಚಾರ ಮಾಡುತ್ತ ಸೇವೆ ಸಲ್ಲಿಸುತ್ತಿದೆ. ಗ್ರಾಹಕರು ಯಾವುದೇ ಬ್ಯಾಂಕ್‌ನ ಅಕೌಂಟ್ ಇದ್ರೂ ಹಣ ನೀಡುತ್ತಿದ್ದಾರೆ. ಎಇಪಿಎಸ್ ಮುಖಾಂತರ ಅಂಚೆ ಕಚೇರಿ ಸಿಬ್ಬಂದಿ ಗ್ರಾಹಕರಿಗೆ ಹಣ ನೀಡುತ್ತಿದ್ದಾರೆ.

ಮೂವರು ಚಿಕ್ಕ ಮಕ್ಕಳಿಗೆ ಕೊರೋನಾ: ಕರುನಾಡಲ್ಲಿ ಮುಂದುವರಿದ ರುದ್ರ ನರ್ತನ...!

ದಿನಕ್ಕೆ ಒಂದು ಅಕೌಂಟ್‌ಗೆ 10 ಸಾವಿರ ಹಣ ನಿಗದಿ ಮಾಡಿದ್ದು, ಆಧಾರ ಕಾರ್ಡ್‌ ಮೂಲಕ ಅಂಚೆ ಕಚೇರಿ ಸಿಬ್ಬಂದಿ ವ್ಯವಹಾರ ನಿರ್ವಹಣೆ ಮಾಡುತ್ತಿದ್ದಾರೆ. ಸಾಮಾಜಿಕ ಅಂತರ ಕಾಯ್ದುಕೊಂಡೇ ಪೋಸ್ಟ್ ಸಿಬ್ಬಂದಿ ಕೆಲಸ ನಿರ್ವಹಿಸುತ್ತಿದ್ದಾರೆ. ಲಾಕ್‌ಡೌನ್ ನಿಂದ ತೊಂದರೆಪಡುತ್ತಿರುವ ಜನರಿಗೆ ಸಂಚಾರಿ ಪೋಸ್ಟ್ ಆಫೀಸ್ ತಸು ನೆಮ್ಮದಿ ತಂದಿದೆ.