ಕಿರಣ್ ಮಜುಂದಾರ್ ಷಾ ಮನೆಗೆ ಮೋಹನ್ ಭಾಗವತ್| ಮಜುಂದಾರ್ ಜತೆ ಕೆಲ ಕಾಲ ಅವರೊಂದಿಗೆ ಚರ್ಚೆ ನಡೆಸಿದ ಭಾಗವತ್| ಯಾವ ಕಾರಣಕ್ಕೆ ಭೇಟಿ ನೀಡಿದ್ದರು ಎಂಬುದು ತಿಳಿದುಬಂದಿಲ್ಲ| ಕೋವಿಡ್ ಲಸಿಕೆಯ ದರದ ಬಗ್ಗೆ ಇತ್ತೀಚೆಗಷ್ಟೇ ಅಸಮಾಧಾನ ವ್ಯಕ್ತಪಡಿಸಿದ್ದ ಕಿರಣ್ ಮಜುಂದಾರ್|
ಆನೇಕಲ್(ಮಾ.04): ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಬಯೋಕಾನ್ ಮುಖ್ಯಸ್ಥೆ, ಉದ್ಯಮಿ ಕಿರಣ್ ಮಜುಂದಾರ್ ಷಾ ಅವರ ಮನೆಗೆ ಭೇಟಿ ನೀಡಿದ್ದು, ಕುತೂಹಲ ಮೂಡಿಸಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಎಲೆಕ್ಟ್ರಾನಿಕ್ಸಿಟಿ ಸಮೀಪದ ಹುಸ್ಕೂರಿನಲ್ಲಿರುವ ಕಿರಣ್ ಮಜುಂದಾರ್ ಷಾ ಮನೆಗೆ ಭೇಟಿ ನೀಡಿದ್ದ ಭಾಗವತ್, ಕೆಲ ಕಾಲ ಅವರೊಂದಿಗೆ ಚರ್ಚೆ ನಡೆಸಿದರು. ಈ ಭೇಟಿ ವೇಳೆ ಯಾರಿಗೂ ಮನೆಯೊಳಗೆ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು.
ಮೆಟ್ರೋ ನಿಲ್ದಾಣಕ್ಕೆ ಬಯೋಕಾನ್ನಿಂದ 65 ಕೋಟಿ ದೇಣಿಗೆ
ರಾಮ ಮಂದಿರ ನಿಧಿ ಸಮರ್ಪಣೆ ಬಗ್ಗೆ ಚರ್ಚೆ ಮಾಡುವುದಕ್ಕೋ ಅಥವಾ ರಾಜಕಾರಣದ ಬಗ್ಗೆ ಮಾತನಾಡಲೋ?, ಯಾವ ಕಾರಣಕ್ಕೆ ಭೇಟಿ ನೀಡಿದ್ದರು ಎಂಬುದು ತಿಳಿದುಬಂದಿಲ್ಲ. ಕೋವಿಡ್ ಲಸಿಕೆಯ ದರದ ಬಗ್ಗೆ ಕಿರಣ್ ಮಜುಂದಾರ್ ಇತ್ತೀಚೆಗಷ್ಟೇ ಅಸಮಾಧಾನ ವ್ಯಕ್ತಪಡಿಸಿದ್ದರು. ಹೀಗಾಗಿ ಈ ಭೇಟಿ ಮಹತ್ವ ಪಡೆದಿದೆ ಎನ್ನಲಾಗಿದೆ.
