ಬೆಂಗಳೂರಿನಲ್ಲಿ ನೀರಿನ ಕೊರತೆ ನೀಗಿಸಲು ಹಲವು ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರಮು ಖವಾಗಿ ಪ್ರತಿ ನಲ್ಲಿಗಳಿಗೂ ಏರೇ ಟರ್ ಅಳವಡಿಕೆ, ಶುದ್ದೀಕರಿಸಿದ ನೀರಿನ ಬಳಕೆ ಹೆಚ್ಚಿಸುವುದು, ಮರುಬಳಕೆ ನೀರನ್ನು ಕರೆಗೆ ತುಂಬಿ ಸುವ ಕೆಲಸ ಮಾಡಲಾಗುವುದು. ಈ ಎಲ್ಲ ಕ್ರಮದಿಂದ 2026ರ ಜುಲೈ 1ರಷ್ಟರಲ್ಲಿ ಬೆಂಗಳೂರಿನ ಅಂತರ್ಜಲ ವೃದ್ಧಿ ಮಾಡುವ ಹೊಂದಲಾಗಿದೆ: ಜಲಮಂಡಳಿ ಅಧ್ಯಕ್ಷ ಡಾ| ರಾಮ್ ಪ್ರಸಾತ್ ಮನೋಹರ್
ಬೆಂಗಳೂರು(ಮಾ.22): ಕಾವೇರಿ ಹಾಗೂ ಕೊಳವೆಬಾವಿಗಳ ನೀರಿನ ಪ್ರಮಾಣವನ್ನು ಮ್ಯಾಪಿಂಗ್ ಮಾಡಲಾಗುವುದು. ಸರಾಸರಿ ಬಳಕೆಗಿಂತ ಹೆಚ್ಚು ನೀರು ಬಳಸಿದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲು ಚಿಂತನೆ ನಡೆಸಲಾಗಿದೆ ಎಂದು ಜಲಮಂಡಳಿ ಅಧ್ಯಕ್ಷ ಡಾ| ರಾಮ್ ಪ್ರಸಾತ್ ಮನೋಹರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನೀರಿನ ಕೊರತೆ ನೀಗಿಸಲು ಹಲವು ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರಮು ಖವಾಗಿ ಪ್ರತಿ ನಲ್ಲಿಗಳಿಗೂ ಏರೇ ಟರ್ ಅಳವಡಿಕೆ, ಶುದ್ದೀಕರಿಸಿದ ನೀರಿನ ಬಳಕೆ ಹೆಚ್ಚಿಸುವುದು, ಮರುಬಳಕೆ ನೀರನ್ನು ಕರೆಗೆ ತುಂಬಿ ಸುವ ಕೆಲಸ ಮಾಡಲಾಗುವುದು. ಈ ಎಲ್ಲ ಕ್ರಮದಿಂದ 2026ರ ಜುಲೈ 1ರಷ್ಟರಲ್ಲಿ ಬೆಂಗಳೂರಿನ ಅಂತರ್ಜಲ ವೃದ್ಧಿ ಮಾಡುವ ಹೊಂದಲಾಗಿದೆ ಎಂದರು.
ಬೆಂಗ್ಳೂರಲ್ಲಿ ನೀರಿನ ಕೊರತೆ ನಡುವೆಯೂ ಹೋಟೆಲಲ್ಲಿ ಹೋಳಿ ಪೂಲ್ ಪಾರ್ಟಿ..!
ನೀರಿನ ಬಳಕೆ ಬಗ್ಗೆ ನಿಗಾ:
ಜಲಮಂಡಳಿ ಅಂದಾಜಿನಂತೆ ಒಂದು ಕುಟುಂಬಕ್ಕೆ ಮಾಸಿಕ 18 ಸಾವಿರ ಲೀಟರ್ ನೀರಿನ ಅವಶ್ಯಕತೆಯಿದೆ. ಅದಕ್ಕೆ ತಕ್ಕಂತೆ ಸದ್ಯ ನೀರು ಪೂರೈಸಲಾಗುತ್ತಿದೆ. ಆದರೆ, ಕೆಲವೊದ್ದು ಈ ನೀರಿನ ಬಳಕೆ ಹೆಚ್ಚಾಗಿ ಬೇರೆಡೆಗೆ ನೀರಿನ ಕೊರತೆ ಉಂಟಾಗುತ್ತದೆ. ಹೀಗಾಗಿ ಹೋಟೆಲ್, ಕೈಗಾರಿಕಾ ಪ್ರದೇಶ, ವಸತಿ ಪ್ರದೇಶಗಳಲ್ಲಿ ನೀರಿನ ಬಳಕೆ ಪ್ರಮಾಣವನ್ನು ಮೀರುವವರ ಮೇಲೆ ನಿಗಾವಹಿಸಲು ನಿರ್ಧರಿಸಲಾಗಿದೆ. ಅದಕ್ಕಾಗಿ ಪ್ರತಿ ನೀರಿನ ಸಂಪರ್ಕವನ್ನು ಮ್ಯಾಪಿಂಗ್ ಮಾಡಲಾಗುವುದು ಎಂದು ಅವರು ಹೇಳಿದರು.
ಏರೇಟರ್ ಅಳವಡಿಸದಿದ್ದರೆ ಶೇ.50ರಷ್ಟು ನೀರು ಕಡಿತ
ಮಿತವಾಗಿಸಲು ಮಾಲ್ಗಳು, ವಾಣಿಜ್ಯ ಸಂಕೀರ್ಣಗಳು, ಅಪಾ ರ್ಟ್ಮೆಂಟ್ ಸೇರಿದಂತೆ ಇನ್ನಿತರ ಕಟ್ಟಡಗಳ ನಲ್ಲಿಗಳಿಗೆ ಮಾ. 31 ರೊಳಗೆ ಫ್ಲೋ ರಿಕ್ಟರ್ ಅಥವಾ ಏರೇಟರನ್ನು ಅಳವಡಿಸದಿದ್ದರೆ ಸದ್ಯ ಪೂರೈಸಲಾಗುತ್ತಿರುವ ನೀರಿನ ಪ್ರಮಾಣದಲ್ಲಿ ಶೇ. 50ರಷ್ಟು ಕಡಿತಗೊಳಿಸುವುದಾಗಿ ಜಲಮಂಡಳಿ ಆದೇಶಿಸಿದೆ.
ನಗರದಲ್ಲಿ ನೀರಿನ ಅಭಾವ ಹೆಚ್ಚುತ್ತಿದ್ದು ಅದನ್ನು ಸರಿದೂಗಿಸಲು ನಾನಾ ಕ್ರಮ ಕೈಗೊಳ್ಳಲಾಗುತ್ತಿದೆ. ಪೂರಕವಾಗಿ ಮಾಲ್ಗಳು ವಾಣಿಜ್ಯ ಸಂಕೀರ್ಣಗಳು, ಅಪಾರ್ಟ್ ಮೆಂಟ್, ಹೋಟೆಲ್, ಸರ್ಕಾರಿ ಕಟ್ಟಡಗಳು ಹಾಗೂ ಧಾರ್ಮಿಕ ಸ್ಥಳಗಳು ಸೇರಿದಂತೆ ಸಾರ್ವಜನಿಕ ಪ್ರದೇಶಗಳಲ್ಲಿ ಸ್ವಚ್ಛತೆಗಾಗಿ ಬಳಸುವ ನಲ್ಲಿಗಳಲ್ಲಿ ಕಡ್ಡಾಯವಾಗಿ ಫ್ಲೋ ರಿಸಿಕ್ಸರ್ ಅಥವಾ ಏರೇಟನ್ನು ಅಳವಡಿಸದಿ ದ್ದರೆ ಜಲಮಂಡಳಿಯಿಂದ ಸರಬರಾಜು ಮಾಡಲಾಗುತ್ತಿರುವ ನೀರಿನ ಪ್ರಮಾಣದಲ್ಲಿ ಶೇ. 50ರಷ್ಟು ಕಡಿತಗೊಳಿಸುವುದಾಗಿ ತಿಳಿಸಿದೆ. ಅದರ ಜತೆಗೆ ແບ ຫ 19640 500 10900 25 ವಿಧಿಸಲಾಗುವುದು ಎಂದೂ ಹೇಳಿದೆ.
ನಲ್ಲಿಗಳಿಗೆ ಫ್ಲೋ ರಿಸ್ಟ್ರಿಕ್ಟರ್ ಅಥವಾ ವಿರೇಟರ್ ಅಳವಡಿಕೆ ಮಾಡದಿರುವುದು ಕಂಡು ಬಂದರೆ ಸಾರ್ವಜನಿಕರು ಜಲಮಂಡಳಿಯ ಸಹಾಯವಾಣಿ 1916ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಕೋರಲಾಗಿದೆ ಎಂದು ಜಲಮಂಡಳಿ ಅಧ್ಯಕ್ಷ ಡಾ। ರಾಮ್ ಪ್ರಸಾತ್ ಮನೋಹರ್ ತಿಳಿಸಿದರು.
1 ಬೋರೈಲ್ಗೆ 2 ಇಂಗುಗುಂಡಿ ಕಡ್ಡಾಯ
ಅಂತರ್ಜಲ ವೃದ್ಧಿಗಾಗಿ ಮಳೆ ನೀರು ಇಂಗುಗುಂಡಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಜಲಮಂಡಳಿಯಿಂದ ಕೊಳವೆಬಾವಿ ಕೊರೆಸಿದರೆ ಎರಡು ಇಂಗುಗುಂಡಿ ನಿರ್ಮಿಸಲಾಗುವುದು. ಅದೇ ರೀತಿ ಸಾರ್ವಜನಿಕರು ಖಾಸಗಿಯಾಗಿ ಕೊಳವೆ ಬಾವಿ ಕೊರೆಸಿದರೆ ಇಂಗುಗುಂಡಿ ನಿರ್ಮಿಸಬೇಕು. ಒಂದು ವೇಳೆ ಇಂಗುಗುಂಡಿ ನಿರ್ಮಾಣಕ್ಕೆ ಜಾಗದ ಅಭಾವವಿದ್ದರೆ, ಉದ್ಯಾನ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಜಲಮಂಡಳಿಯೇ ಜಾಗ ಗುರುತಿಸಿಕೊಡಲಿದೆ. ಒಂದು ವೇಳೆ ಇಂಗು ಗುಂಡಿ ನಿರ್ಮಿಸದಿದ್ದರೆ, ಅಂತಹವರಿಂದ ಶುಲ್ಕ ವಸೂಲಿ ಮಾಡಿ ಜಲಮಂಡಳಿಯೇ ಇಂಗುಗುಂಡಿ ನಿರ್ಮಿಸಲಿದೆ ಎಂದು ರಾಮ್ ಪ್ರಸಾತ್ ಮನೋಹರ್ ತಿಳಿಸಿದರು.
ಕೆಎಂಎಫ್ ಹಾಲಿನ ಟ್ಯಾಂಕರಲ್ಲಿ ನೀರು ಪೂರೈಕೆ: ಸಿಎಂ ಸಿದ್ದರಾಮಯ್ಯ
ನೀರು ದುರ್ಬಳಕೆ ಪತ್ತೆಗೆ ಮಂಡಳಿ ಅಭಿಯಾನ
ಕುಡಿಯಲು ಮತ್ತು ಗೃಹ ಬಳಕೆಗೆ ಹೊರತುಪಡಿಸಿ ವಾಹನ ಸ್ವಚ್ಛತೆ ಸೇರಿದಂತೆ ಇನ್ನಿತರ ಕೆಲಸಗಳಿಗೆ ಕಾವೇರಿ ಮತ್ತು ಕೊಳವೆಬಾವಿ ನೀರು ಬಳಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಈವರೆಗೆ 3 ಮಂದಿಯ ವಿರುದ್ಧ ಕ್ರಮ ಕೈಗೊಂಡು ತಲಾ 25 ಸಾವಿರ ದಂಡ ವಸೂಲಿ ಮಾಡಲಾಗಿದೆ. ಮಾ.25ರಿಂದ ನೀರು ದುರ್ಬಳಕೆ ಮಾಡುವವರ ಪತ್ತೆಗೆ ಅಭಿಯಾನ ನಡೆಸಲಾಗುವುದು. ನೀರಿನ ಮಹತ್ವದ ಕುರಿತಂತೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಲಾಗು ತ್ತದೆ ಎಂದು ರಾಮ್ ಪ್ರಸಾತ್ ವಿವರಿಸಿದರು.
1 ಸಾವಿರ ಲೀಟರ್ ನೀರಿಗೆ ₹10 ಶುಲ್ಕ
ನೀರಿನ ಅಭಾವವನ್ನು ಸರಿದೂಗಿಸಲು ಸಂಸ್ಕ ರಿಸಿದ ನೀರಿನ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಸದ್ಯ ಜಲಮಂಡಳಿಯ ಸಂಸ್ಕರಣಾ ಘಟಕದಿಂದ 1,300 ಎಂಎಲ್ಡಿ ನೀರು ಸಂಸ್ಕರಿಸಲಾಗುತ್ತಿದೆ. ಪ್ರಮುಖವಾಗಿ ಹೋಟೆಲ್, ಕೈಗಾರಿಕಾ ಪ್ರದೇಶಗಳಲ್ಲಿ ಸಂಸ್ಕರಿಸಿದ ನೀರಿನ ಬಳಕೆಗೆ ಉತ್ತೇಜಿಸಲಾ ಗುತ್ತಿದೆ. ಸಂಸ್ಕರಿಸಿದ ನೀರನ್ನು 1000 ಲೀಟರ್ ಗೆ 10 ಶುಲ್ಕ ವಿಧಿಸಲಾಗುತ್ತೆಂದು ರಾಮ್ ಪ್ರಸಾತ್ ಮನೋಹರ್ ವಿವರಿಸಿದರು.