ಶ್ರೀನಿವಾಸಪುರ ತಾಲೂಕಿನ ಗೌನಿಪಲ್ಲಿ ಗ್ರಾಮದಲ್ಲಿ ಮಗನಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಸಂಗತಿ ತಿಳಿದು ಹೃದಯಾಘಾತದಿಂದ ತಾಯಿ ಮೃತಪಟ್ಟಿದ್ದಾರೆ.
ಕೋಲಾರ(ಜು.30): ಶ್ರೀನಿವಾಸಪುರ ತಾಲೂಕಿನ ಗೌನಿಪಲ್ಲಿ ಗ್ರಾಮದಲ್ಲಿ ಮಗನಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಸಂಗತಿ ತಿಳಿದು ಹೃದಯಾಘಾತದಿಂದ ತಾಯಿ ಮೃತಪಟ್ಟಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಗೌನಿಪಲ್ಲಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿರುವ 40 ವರ್ಷದ ವ್ಯಕ್ತಿಗೆ ಸೋಂಕು ಇರುವುದು ಮಂಗಳವಾರ ರಾತ್ರಿ ಗೊತ್ತಾಗಿತ್ತು. ಈ ವಿಷಯ ತಿಳಿದ ತಾಯಿಗೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ.
ಝೂಸ್ ಆಫ್ ಕರ್ನಾಟಕ ಮೊಬೈಲ್ ಆ್ಯಪ್ ಬಿಡುಗಡೆ
ಕೊರೋನಾಕ್ಕೆ ವ್ಯಕ್ತಿ ಬಲಿ:
ಜಿಲ್ಲೆಯಲ್ಲಿ ಬುಧವಾರ ಕೊರೊನಾ ಸೋಂಕಿತ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಸೋಂಕಿತರ ಸಾವಿನ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇದುವರೆಗೆ 1257 ಮಂದಿಗೆ ಕೊರೊನಾ ಸೋಂಕು ತಗುಲಿದ್ದು ಆ ಪೈಕಿ 367 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಹೊರ ಹೋಗಿದ್ದಾರೆ. 866 ಸಕ್ರಿಯ ಪ್ರಕರಣಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಬುಧವಾರ ಆಸ್ಪತ್ರೆಯಿಂದ ಬಿಡುಗಡೆ ಆಗಿರುವವರ ಸಂಖ್ಯೆ ಕೇವಲ 6 ಮಂದಿ ಮಾತ್ರ.
