ತಾಯಿ, ಮಗ ಬೈಕ್ ಸಮೇತ ನದಿಗೆ ಬಿದ್ದು ಸಾವು| ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ ಕಾಡಶೆಟ್ಟಿಹಳ್ಳಿ ಗ್ರಾಮದ ಬಳಿ ನಡೆದ ಘಟನೆ| ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು|
ಹಾವೇರಿ(ಡಿ.09): ಜಿಲ್ಲೆಯ ಹಾನಗಲ್ಲ ತಾಲೂಕಿನ ಕಾಡಶೆಟ್ಟಿಹಳ್ಳಿ ಗ್ರಾಮದ ಬಳಿ ತಾಯಿ, ಮಗ ಬೈಕ್ ಸಮೇತ ಧಮಾರ್ ನದಿಗೆ ಬಿದ್ದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಮಗ ಬಸವರಾಜ ಕುಂದೂರ (22) ಮತ್ತು ತಾಯಿ ಚನ್ನವ್ವ ಕುಂದೂರ (45) ನೀರು ಪಾಲಾದವರು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕಂಚಿನೆಗಳೂರು ಗ್ರಾಮದಿಂದ ಕಾಡಶೆಟ್ಟಿಹಳ್ಳಿ ಗ್ರಾಮದತ್ತ ತೆರಳುತ್ತಿದ್ದ ವೇಳೆ ಧರ್ಮಾ ನದಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್ನಲ್ಲಿ ಬೈಕ್ ಬಿದ್ದಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರ ಭೇಟಿ ನೀಡಿದ್ದು, ನೀರು ಪಾಲಾದವರಿಗೆ ಶೋಧಕಾರ್ಯ ಮುಂದುವರಿದೆ. ನದಿ ನೀರಿನಲ್ಲಿ ಬೈಕ್ ಪತ್ತೆಯಾಗಿದೆ. ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
