* ಮುಧೋಳ ನಗರಸಭಾ ಅಧ್ಯಕ್ಷ ಸಿದ್ದನಾಥ ಮಾನೆ ಕೋವಿಡ್‌ಗೆ ಬಲಿ* 5 ದಿನಗಳ ಹಿಂದೆಯಷ್ಟೇ ಕೋವಿಡ್‌ನಿಂದಲೇ ಮೃತಪಟ್ಟಿದ್ದ ಸಿದ್ದನಾಥ ಅವರ ತಾಯಿ* ಸಿದ್ದನಾಥ ಸಾವಿಗೆ ಡಿಸಿಎಂ ಗೋವಿಂದ ಕಾರಜೋಳ ಸಂತಾಪ

ಬಾಗಲಕೋಟೆ(ಮೇ.23): ಜಿಲ್ಲೆಯ ಮುಧೋಳ ನಗರಸಭಾ ಅಧ್ಯಕ್ಷ ಕೋವಿಡ್‌ಗೆ ಬಲಿಯಾದ ಘಟನೆ ಇಂದು (ಭಾನುವಾರ) ಬೆಳಗಾವಿಯಲ್ಲಿ ನಡೆದಿದೆ. ಸಿದ್ದನಾಥ ಮಾನೆ (34) ಎಂಬುವರೇ ಕೊರೋನಾಗೆ ಬಲಿಯಾದವರಾಗಿದ್ದಾರೆ.

Add Asianetnews Kannada as a Preferred SourcegooglePreferred

ಕೆಲ ದಿನಗಳಿಂದ ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಸಿದ್ದನಾಥ ಮಾನೆ ಅವರನ್ನ ಬೆಳಗಾವಿಯ ಖಾಸಗಿ ಆಸಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಸಿದ್ದನಾಥ ಮಾನೆ ಮೃತಪಟ್ಟಿದ್ದಾರೆ. ಕಳೆದ 5 ದಿನಗಳ ಹಿಂದೆಯಷ್ಟೇ ಮನೆಯಲ್ಲಿ ಕೋವಿಡ್‌ನಿಂದಲೇ ಸಿದ್ದನಾಥ ತಾಯಿ ಸಹ ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.

"

ಗುಲಬರ್ಗಾ ವಿವಿ ಮಾಜಿ ಕುಲಪತಿ ಪ್ರೊ. ಮೇಲಕೇರಿ ಕೊರೋನಾದಿಂದ ನಿಧನ

ಸಿದ್ದನಾಥ ಸಾವಿಗೆ ಮುಧೋಳ ಶಾಸಕ ಹಾಗೂ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಶೋಕ ವ್ಯಕ್ತಪಡಿಸಿ, ಶೃದ್ದಾಂಜಲಿ ಸಲ್ಲಿಸಿದ್ದಾರೆ. 

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona