Asianet Suvarna News Asianet Suvarna News

ಮುಂಬೈನಿಂದ ಬಂದು ಕ್ವಾರೆಂಟೈನ್‌ನಲ್ಲಿದ್ದಾತ 2 ಗಂಟೆಯಲ್ಲೇ ಆತ್ಮಹತ್ಯೆ

ಮುಂಬೈಯಿಂದ ಬಂದು 2 ಗಂಟೆಗಳ ಕಾಲ ಕ್ವಾರಂಟೈನ್‌ನಲ್ಲಿದ್ದ 55ರ ಹರೆಯದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಕಡಂದಲೆ ಶಾಲೆಯಲ್ಲಿ ಗುರುವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

Mumbai return man commits suicide in quarantine
Author
Bangalore, First Published May 22, 2020, 9:23 AM IST

ಮೂಡುಬಿದಿರೆ(ಮೇ 22): ಮುಂಬೈಯಿಂದ ಬಂದು 2 ಗಂಟೆಗಳ ಕಾಲ ಕ್ವಾರಂಟೈನ್‌ನಲ್ಲಿದ್ದ 55ರ ಹರೆಯದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಕಡಂದಲೆ ಶಾಲೆಯಲ್ಲಿ ಗುರುವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ಆತ್ಮಹತ್ಯೆ ಮಾಡಿಕೊಂಡವರು ಕಡಂದಲೆ ನಿವಾಸಿಯಾಗಿದ್ದು, ಅಣ್ಣ ತಮ್ಮಂದಿರು 3 ಜನ ಮುಂಬೈಯ ಹೋಟೆಲ್‌ನಲ್ಲಿ ಕೆಲಸ ಮಾಡಿಕೊಂಡಿದ್ದರು. ಬುಧವಾರ ರಾತ್ರಿ ಇಬ್ಬರು ಸಹೋದರರ ಜೊತೆಗೆ ಮೂಡುಬಿದಿರೆಗೆ ಬಂದಿದ್ದ ಅವರು, ಬುಧವಾರ ತಡರಾತ್ರಿ 1 ಗಂಟೆಯಿಂದ ಕಡಂದಲೆ ಶಾಲೆಯಲ್ಲಿ ಕ್ವಾರಂಟೈನ್‌ನಲ್ಲಿದ್ದರು. ಆರ್ಥಿಕ ತೊಂದರೆ, ಕೋವಿಡ್‌ 19 ಬಗ್ಗೆ ಹೆದರಿದ್ದ ಅವರು ಮುಂದೆ ಜೀವನೋಪಾಯಕ್ಕಾಗಿ ಏನು ಕೆಲಸ ಮಾಡುವುದೆಂದು ಗೊಂದಲದಲ್ಲಿದ್ದು, ಈ ಬಗ್ಗೆ ಸಹೋದರರ ಬಳಿ ಹೇಳಿಕೊಂಡಿದ್ದರೆನ್ನಲಾಗಿದೆ.

ವಿಪರೀತ ಮದ್ಯ ಸೇವಿಸಿ ಮಲಗಿದ್ದ ವ್ಯಕ್ತಿ ಸಾವು

ನಂತರ ಯಾರ ಗಮನಕ್ಕೂ ಬಾರದಂತೆ ನೇಣು ಬಿಗಿದು ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ಮೃತರಿಗೆ ಮೂವರು ಮಕ್ಕಳಿದ್ದಾರೆ. ಈ ಶಾಲೆಯಲ್ಲಿ ಕ್ವಾರಂಟೈನ್‌ನಲ್ಲಿ ಇನ್ನೂ ಹಲವರಿದ್ದು, ಅವರನ್ನು ಬೇರೆ ಕಡೆ ಸ್ಥಳಾಂತರಿಸಲಾಗುವುದು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಉಪವಿಭಾಗಾಧಿಕಾರಿ ಮದನ ಮೋಹನ್‌ ಸಿ. ಭೇಟಿ ನೀಡಿದ್ದಾರೆ. ಮೃತರು ಪತ್ನಿ ಮೂವರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

ಪರಿಹಾರ ಘೋಷಣೆ:

ಆತ್ಮಹತ್ಯೆಗೆ ಶರಣಾದ ಕಡಂದಲೆ ವ್ಯಕ್ತಿಯ ಕುಟುಂಬಕ್ಕೆ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ 3 ಲಕ್ಷ ರು. ನೆರವಿನ ಘೋಷಣೆಯಾಗಿದೆ ಎಂದು ತಿಳಿದು ಬಂದಿದೆ.

[ಸಮಸ್ಯೆಗಳು ಜೀವನದ ಅವಿಭಾಜ್ಯ ಅಂಗ. ಸಮಸ್ಯೆಯಿಲ್ಲದ ಮನುಷ್ಯನಿಲ್ಲ. ಯಾವುದೇ ಸಮಸ್ಯೆ ಜೀವನದ ಅಂತ್ಯವಲ್ಲ. ಆತ್ಮಹತ್ಯೆ ಆಲೋಚನೆ ಹೊಳೆದರೆ ಸರ್ಕಾರದ ಸಹಾಯವಾಣಿಗೆ ಕರೆ ಮಾಡಿ: 080 25497777 ಅಥವಾ ಆರೋಗ್ಯ ಸಹಾಯವಾಣಿ 104 ಗೆ ಕರೆ ಮಾಡಿ]

Follow Us:
Download App:
  • android
  • ios