ದಾವಣಗೆರೆಯಲ್ಲಿ ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ. ಸಾಮರಸ್ಯದ ಸಮಾಜವನ್ನು ಕಟ್ಟುವ ಶಕ್ತಿ ಕನ್ನಡ ಸಾಹಿತ್ಯಕ್ಕಿದೆ. ಇದನ್ನು ಉಳಿಸಿ, ಬೆಳೆಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದ ಯು.ಟಿ. ಖಾದರ್

ವರದಿ: ವರದರಾಜ್ , ಏಷ್ಯಾನೆಟ್ ಸುವರ್ಣನ್ಯೂಸ್

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ದಾವಣಗೆರೆ (ಆ. 21): ಸಾಮರಸ್ಯದ ಸಮಾಜವನ್ನು ಕಟ್ಟುವ ಶಕ್ತಿ ಕನ್ನಡ ಸಾಹಿತ್ಯಕ್ಕಿದೆ. ಇದನ್ನು ಉಳಿಸಿ, ಬೆಳೆಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ವಿಧಾನ ಸಭೆಯ ಪ್ರತಿಪಕ್ಷ ಉಪನಾಯಕ, ಶಾಸಕ ಯು.ಟಿ. ಖಾದರ್ ಅಭಿಪ್ರಾಯ ಪಟ್ಟರು. ಅವರು ಇಂದು ದಾವಣಗೆರೆಯ ರೋಟರಿ ಬಾಲ ಭವನದಲ್ಲಿ ಕರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಏರ್ಪಡಿಸಿದ್ದ ಸಮಾರಂಭದಲ್ಲಿ ರಾಜ್ಯ ಮಟ್ಟದ ಮರ್ಹೂಮ್ ಯು.ಟಿ. ಫರೀದ್ ಸ್ಮರಣಾರ್ಥ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ ಪ್ರದಾನ ಮಾಡಿ ಮಾತನಾಡುತ್ತಿದ್ದರು. ಇಂದು ಸಮಾಜದಲ್ಲಿ ಸಾಹಿತ್ಯ ಕೃತಿಗಳನ್ನು ಕೊಂಡು ಓದುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಯುವಜನರು ಮತ್ತು ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಸಕ್ತಿಯನ್ನು ಹೆಚ್ಚಿಸುವ ಜವಾಬ್ದಾರಿ ಪಾಲಕರಿಗಿದೆ. ಸಾಹಿತ್ಯಿಕ ಕಾರ್ಯಕ್ರಮಗಳು, ಗ್ರಂಥಾಲಯ ಮತ್ತು ಪುಸ್ತಕ ಮಳಿಗೆಗಳಿಗೆ ಮಕ್ಕಳನ್ನು ಕರೆದುಕೊಂಡು ಹೋಗುವ ಮೂಲಕ ಮಕ್ಕಳಲ್ಲಿ ಸಾಹಿತ್ಯಾಭಿರುಚಿಯನ್ನು ಹೆಚ್ಚಿಸಬೇಕೆಂದು ಯು.ಟಿ, ಖಾದರ್ ಹೇಳಿದರು. ಸ್ವರ್ಗ ನರಕ ಇದೆ ಎಂದು ಹೇಳುತ್ತಾರೆ. ಆದ್ರೆ ಸ್ವರ್ಗವನ್ನು ನೋಡಿರುವವರು ಯಾರು ಇಲ್ಲ. ಮನುಷ್ಯನಿಗೆ ಕಷ್ಟ ಸುಖ ಸರ್ವೇ ಸಾಮಾನ್ಯ. ಕಷ್ಟಗಳಿಗೆ ಹೆದರಿ ಓಡಿಹೋಗದೇ ತಾಳ್ಮೆಯಿಂದ ಬರುವ ಸಂಕಷ್ಟಗಳನ್ನು ಹೆದರಿಸಿ ಜೀವನ ನಡೆಸಬೇಕಾಗಿದೆ.

ಬಂಡಾಯ ಸಾಹಿತ್ಯದಲ್ಲಿ ಹೊಸ ದಾರಿ ಅವಶ್ಯವಿದೆ: ಹನುಮಂತಯ್ಯ

ಇರುವ ವಾತವರಣದಲ್ಲೇ ಪ್ರೀತಿ ವಿಶ್ವಾಸ ಸೌಹಾರ್ಧತೆಯಿಂದ ಬದುಕಿ ಸ್ವರ್ಗ ಕಾಣಬೇಕಿದೆ. ತಾಳ್ಮೆಯಿಂದ ಎಲ್ಲವನ್ನು ಗೆಲ್ಲುವ ಗುಣ ಬೆಳೆಸಿಕೊಳ್ಳಬೇಕಿದೆ ಎಂದರು. ಕವಿ, ಅಧ್ಯಾಪಕ ಸಂತೆಬೆನ್ನೂರು ಫೈಜ್ನಟ್ರಾಜ್’ರವರು ತಮ್ಮ ಕೃತಿ ‘ಕೇಳದೆ ನಿಮಗೀಗ’ಕ್ಕೆ 2020ನೇ ಸಾಲಿನ ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ ಸ್ವೀಕರಿಸಿದರು. ರಾಜ್ಯ ಕಬ್ಬು ಬೆಳೆಗಾರರ ಸಂಘದ ಉಪಾಧ್ಯಕ್ಷ ತೇಜಸ್ವಿ ವಿ. ಪಟೇಲ್, ನ್ಯಾಯವಾದಿ ಅನೀಶ್ ಪಾಷಾ, ಮುಸ್ಲಿಮ್ ಮುಖಂಡ ದಾದಾ ಫೀರ್ ಶೇಠ್, ಜಮಾಅತೆ ಇಸ್ಲಾಮೀ ಹಿಂದ್ ದಾವಣಗೆರೆ ಘಟಕದ ಅಧ್ಯಕ್ಷ ಅಯ್ಯುಬ್ ಖಾನ್, ಮಿಲ್ಲತ್ ಅಸೋಸಿಯೇಶನ್ ನ ಅಧ್ಯಕ್ಷ ಸೆಯ್ಯದ್ ಸೈಫುಲ್ಲ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ಓದುವ ಅಭಿರುಚಿ ಬೆಳೆಸಿಕೊಳ್ಳಬೇಕು: ಜಿಲ್ಲಾಧಿಕಾರಿ ಆರ್.ಲತಾ

ನಂತರ ನಡೆದ ಬಹುಭಾಷಾ ಕವಿಗೋಷ್ಠಿಯಲ್ಲಿ ಕಲೀಮ್ ಪಾಷಾ ಜೆ. (ಕನ್ನಡ), ಡಾ. ಹಸೀನಾ ಖಾದ್ರಿ (ಕನ್ನಡ), ಡಾ. ದಾವೂದ್ ಮುಹ್ಸಿನ್ (ಉರ್ದು), ಗೋವರ್ಧನ ಗಿರಿಶಾಂ (ಕನ್ನಡ), ಗೌಸ್ ಫೀರ್ ಹಮ್ದರ್ದ್ (ಉರ್ದು), ಸಿರಾಜ್ ರೆಹಮಾನಿ (ಉರ್ದು), ಸನಾವುಲ್ಲಾ ನವಿಲೇಹಾಳ್ (ಕನ್ನಡ) ಹಾಗೂ ಸಂತೆಬೆನ್ನೂರು ಫೈಜ್ನಾಟ್ರಾಜ್ (ಕನ್ನಡ) ಕವನಗಳನ್ನು ಮಂಡಿಸಿದರು. ಸಮಾರಂಭದಲ್ಲಿ ನೆರಳು ಬೀಡಿ ಕಾರ್ಮಿಕರ ಯೂನಿಯನ್’ನ ಅಧ್ಯಕ್ಷೆ ಜಬೀನಾ ಖಾನಂ, ಅಧ್ಯಾಪಕಿ ಸಾಹಿರಾ ಬಾನು ಚೆಳ್ಳಕೆರೆ ಹಾಗೂ ಸಾಮಾಜಿಕ ಕಾರ್ಯಕರ್ತ ನಿಝಾಮುದ್ದೀನ್ ರನ್ನುಅಭಿನಂದಿಸಲಾಯಿತು.