ನಮಾಜ್ ಬಿಟ್ಟು ಬಂದು ಕೊರೋನಾ ಬಲಿ ಪಡೆದ ಹಿಂದೂ ವ್ಯಕ್ತಿ ಅಂತ್ಯಕ್ರಿಯೆ ಮಾಡಿದ ಮುಸ್ಲಿಂ ಯುವಕರು
ಕೊರೋನಾ ಮಹಾಮಾರಿಯಿಂದ ಮೃತಪಟ್ಟ ಹಿಂದೂ ಯುವಕನ ಅಂತ್ಯಸಂಸ್ಕಾರವನ್ನು ಮುಸ್ಲಿಂ ಯುವಕರು ನೆರವೇರಿಸಿ ಮಾನವೀಯತೆ ಮೆರೆದಿದ್ದಾರೆ.
ಹಾಸನ (ಸೆ.20) : ಕೊರೋನಾ ಮಹಾಮಾರಿಯಿಂದ ಮೃತಪಟ್ಟಿದ್ದ ಹಿಂದೂ ವ್ಯಕ್ತಿಯ ಅಂತ್ಯಕ್ರಿಯೆಯನ್ನು ಮುಸ್ಲಿಂ ಯುವಕರು ನೆರವೇರಿಸಿದ್ದಾರೆ.
ನಮಾಜ್ ಬಿಟ್ಟು ಬಂದು ಹಿಂದೂ ಧರ್ಮದ ವಿಧಿ ವಿಧಾನದಂತೆ ಅಂತ್ಯಕ್ರಿಯೆ ನಡೆಸಿದ್ದಾರೆ. ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಕ್ಯಾಮನಹಳ್ಳಿಯಲ್ಲಿ ಈ ಘಟನೆ ನಡೆದಿದೆ.
ಆಚಂಗಿ ಗ್ರಾಮದ ಮೋಹಿದ್ದೀನ್, ಮಸೀದಿ ಸಮಿತಿ ಕಾರ್ಯಕರ್ತರಾದ ಸಮೀರ್, ಆರೀಫ್, ಅಜೀಜ್, ಅಬ್ದುಲ್ ಮಜೀದ್, ಮಹಾಝ್, ಹಮೀದ್ ಕುಡುಗರಹಳ್ಳಿ ಸೇರಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಈ ಮೂಲಕ ಧಾರ್ಮಿಕ ಸಾಮರಸ್ಯದ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಇದನ್ನೂ ಓದಿ: ಯಾದಗಿರಿ: ಮುಸ್ಲಿಂ ಯುವಕರಿಂದ ಹಿಂದೂ ವ್ಯಕ್ತಿ ಅಂತ್ಯಸಂಸ್ಕಾರ
ಹಾಸನದ ಚಂಪಕನಗರದ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಸಿದ್ದಾರೆ. ಮುಸ್ಲಿಂ ಯುವಕರ ಕಾರ್ಯಕ್ಕೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ.
ಬೆಳಗಾವಿಯಲ್ಲಿ ಮುಸ್ಲಿಂ ಯುವಕರಿಂದ ಹಿಂದೂ ವ್ಯಕ್ತಿಯ ಅಂತ್ಯಕ್ರಿಯೆ
"