ಜಿಲ್ಲೆಯಲ್ಲಿ ಹೆಚ್ಚಿನ ಕೊರೋನಾ ಪ್ರಕರಣ ಹರಡಲು ಕಾರಣವಾಗಿರುವ ನಂಜನಗೂಡಿನ ಜುಬಿಲಿಯೆಂಟ್‌ ಕಾರ್ಖಾನೆಯ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಮೈಸೂರು ಜಿಲ್ಲಾ ಕನ್ನಡ ಚಳವಳಿಗಾರರ ಸಂಘದ ಅಧ್ಯಕ್ಷ ಬಿ.ಎ. ಶಿವಶಂಕರ್‌ ಆಗ್ರಹಿಸಿದರು.

ಮೈಸೂರು(ಮೇ 22): ಜಿಲ್ಲೆಯಲ್ಲಿ ಹೆಚ್ಚಿನ ಕೊರೋನಾ ಪ್ರಕರಣ ಹರಡಲು ಕಾರಣವಾಗಿರುವ ನಂಜನಗೂಡಿನ ಜುಬಿಲಿಯೆಂಟ್‌ ಕಾರ್ಖಾನೆಯ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಮೈಸೂರು ಜಿಲ್ಲಾ ಕನ್ನಡ ಚಳವಳಿಗಾರರ ಸಂಘದ ಅಧ್ಯಕ್ಷ ಬಿ.ಎ. ಶಿವಶಂಕರ್‌ ಆಗ್ರಹಿಸಿದರು.

Add Asianetnews Kannada as a Preferred SourcegooglePreferred

ಜುಬಿಲಿಯೆಂಟ್‌ ಕಾರ್ಖಾನೆಯಲ್ಲಿ ಕೊರೋನಾ ಸೋಂಕು ಯಾರಿಂದ, ಎಲ್ಲಿಂದ ಹೇಗೆ ಬಂತು ಎಂಬುದರ ಬಗ್ಗೆ ತನಿಖೆ ನಡೆಸಲು ದಕ್ಷ ಅಧಿಕಾರಿ ಹರ್ಷಗುಪ್ತ ಅವರನ್ನು ನೇಮಕ ಮಾಡಿದರೂ ತನಿಖೆ ಸಫಲವಾಗಲಿಲ್ಲ.

ಸಾರಾ ಮಹೇಶ್‌ಗಿರುವಷ್ಟು ಬುದ್ಧಿ ನನಗಿಲ್ಲ: ಜಿಟಿಡಿ

ಕಾರ್ಖಾನೆಯ ಮಾಲೀಕರು ರಾಜಕೀಯವಾಗಿ ಪ್ರಭಾವಶಾಲಿಯಾಗಿದ್ದು, ತನಿಖೆ ನಡೆಸಲು ಸಾಧ್ಯವಾಗಿಲ್ಲ. ಹೀಗಾಗಿ, ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು. ಸಂಘದ ಕಾರ್ಯದರ್ಶಿ ಸುರೇಶ್‌, ಸಂಘಟನಾ ಕಾರ್ಯದರ್ಶಿ ಕುಮಾರ್‌ ಇದ್ದರು.