Asianet Suvarna News Asianet Suvarna News

ಮೈವಿವಿ ಕುಲಪತಿ ಹುದ್ದೆ : ಮಧ್ಯಂತರ ತಡೆ ತೆರವಿಗೆ ನಕಾರ

ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಹುದ್ದೆಗೆ ಪ್ರೊ.ಎನ್‌.ಕೆ. ಲೋಕನಾಥ್‌ ಅವರನ್ನು ನೇಮಿಸಿ ಹಿಂದಿನ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ನೀಡಿರುವ ಮಧ್ಯಂತರ ತಡೆಯಾಜ್ಞೆ ತೆರವುಗೊಳಿಸಲು ಹೈಕೋರ್ಚ್‌ ಬುಧವಾರ ನಿರಾಕರಿಸಿದೆ.

Mysore VV chancellor post  Rejection of interim suspension snr
Author
First Published Jun 29, 2023, 6:10 AM IST

 ಬೆಂಗಳೂರು :  ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಹುದ್ದೆಗೆ ಪ್ರೊ.ಎನ್‌.ಕೆ. ಲೋಕನಾಥ್‌ ಅವರನ್ನು ನೇಮಿಸಿ ಹಿಂದಿನ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ನೀಡಿರುವ ಮಧ್ಯಂತರ ತಡೆಯಾಜ್ಞೆ ತೆರವುಗೊಳಿಸಲು ಹೈಕೋರ್ಚ್‌ ಬುಧವಾರ ನಿರಾಕರಿಸಿದೆ.

ಲೋಕನಾಥ್‌ ಅವರನ್ನು ಕುಲಪತಿಯಾಗ ನೇಮಿಸಿ 2023ರ ಮಾ.23ರಂದು ಸರ್ಕಾರ ಹೊರಡಿಸಿದ್ದ ಆದೇಶ ರದ್ದುಕೋರಿ ಪ್ರೊ.ಶರತ್‌ ಅನಂತಮೂರ್ತಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಇ.ಎಸ್‌. ಇಂದಿರೇಶ್‌ ಅವರ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ಪ್ರೊ.ಎನ್‌.ಕೆ. ಲೋಕನಾಥ್‌ ಪರ ವಕೀಲರು ಹಾಜರಾಗಿ, ಕಳೆದ 3 ತಿಂಗಳಿಂದ ಲೋಕನಾಥ್‌ ಕುಲಪತಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕುಲಪತಿ ನೇಮಕಾತಿ ಆದೇಶಕ್ಕೆ ತಡೆ ನೀಡಿ ಜೂ.21ರಂದು ಹೊರಡಿಸಿರುವ ಮಧ್ಯಂತರ ಆದೇಶವನ್ನು ತೆರವುಗೊಳಿಸಬೇಕು ಎಂದು ಕೋರಿದರು. ಆದರೆ, ಮಧ್ಯಂತರ ಆದೇಶ ತೆರವುಗೊಳಿಸಲು ನಿರಾಕರಿಸಿದ ಪೀಠ, ವಿಚಾರಣೆಯನ್ನು ಜು.13ಕ್ಕೆ ಮುಂದೂಡಿತು.

ವಿಶ್ವವಿದ್ಯಾಲಯ ಕಾಯ್ದೆಯ ಅನ್ವಯ ನಿರ್ದಿಷ್ಟಅರ್ಹತೆ ಇಲ್ಲದಿದ್ದರೂ ನಿಯಮಾವಳಿ ಉಲ್ಲಂಘಿಸಿ ಕುಲಪತಿಯನ್ನು ನೇಮಕ ಮಾಡಲಾಗಿದೆ. ಕುಲಪತಿಯಾಗಿ ನೇಮಕಗೊಂಡಿರುವ ಲೋಕನಾಥ್‌ ವಿರುದ್ಧ ಕ್ರಿಮಿನಲ್‌ ಪ್ರಕರಣ ಬಾಕಿ ಇದೆ. ಆದ್ದರಿಂದ ಸರ್ಕಾರದ ರದ್ದುಪಡಿಸಬೇಕು ಎಂದು ಶರತ್‌ ಅನಂತಮೂರ್ತಿ ಕೋರಿದ್ದರು. ಅರ್ಜಿಯನ್ನು ಜೂ.21ರಂದು ವಿಚಾರಣೆ ನಡೆಸಿದ್ದ ಹೈಕೋರ್ಚ್‌, ಕುಲಪತಿ ನೇಮಕಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿತ್ತು.

ವೇತನ ಪರಿಷ್ಕರಣೆ ಅಸಾಧ್ಯ

ವಿಧಾನಪರಿಷತ್‌ (ಡಿ.27): ಮೈಸೂರು ವಿಶ್ವವಿದ್ಯಾಲಯದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲದ ಹಿನ್ನೆಲೆಯಲ್ಲಿ ವಿವಿಯಲ್ಲಿ ಕೆಲಸ ಮಾಡುತ್ತಿರುವ 900 ಅತಿಥಿ ಉಪನ್ಯಾಸಕರ ವೇತನ ಪರಿಷ್ಕರಣೆ ಸಾಧ್ಯವಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ್‌ ಸ್ಪಷ್ಟಪಡಿಸಿದ್ದಾರೆ. ಜೆಡಿಎಸ್‌ ಸದಸ್ಯ ಮರಿತಿಬ್ಬೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸದ್ಯ ಮೈಸೂರು ವಿಶ್ವವಿದ್ಯಾಲಯದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲ. ಹೀಗಾಗಿ ವಿವಿಯ ಆರ್ಥಿಕ ಸಮಿತಿಯಲ್ಲಿರುವ ಆರ್ಥಿಕ ಇಲಾಖೆಯ ಅಧಿಕಾರಿಗಳು ವೇತನ ಹೆಚ್ಚಳ ಮಾಡಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ. ಆದ್ದರಿಂದ ಸದ್ಯಕ್ಕೆ ವೇತನ ಪರಿಷ್ಕರಣೆ ಅಸಾಧ್ಯ ಎಂದು ಹೇಳಿದರು.

ಈ ಮಾತಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಮರಿತಿಬ್ಬೇಗೌಡ ಅವರು, ವೇತನ ನೀಡುವುದು ವಿಶ್ವವಿದ್ಯಾಲಯ, ವೇತನ ಹೆಚ್ಚಳ ಮಾಡಬಾರದೆಂದು ಹೇಳಲು ಆರ್ಥಿಕ ಇಲಾಖೆಗೆ ಏನು ಅಧಿಕಾರವಿದೆ? ಬೇರೆ ಬೇರೆ ವಿವಿಗಳಲ್ಲಿ ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ ಮಾಡಲಾಗಿದೆ. ಅದರೆ ಮೈಸೂರು ವಿವಿಯಲ್ಲಿ ಮಾತ್ರ ತಾರತಮ್ಯ ಮಾಡಲಾಗಿದೆ. ಶಿಕ್ಷಣ ವ್ಯವಸ್ಥೆಯನ್ನೇ ಸಚಿವರು ಹಾಳು ಮಾಡಿದ್ದಾರೆ ಎನ್ನುತ್ತಾ ಸಭಾಪತಿಗಳ ಪೀಠದ ಮುಂದೆ ಬಂದು ಧರಣಿ ಆರಂಭಿಸಿದರು.

CBSE BOARD EXAM 2023: CBSE ಪ್ರಾಯೋಗಿಕ ಪರೀಕ್ಷೆಯ ದಿನಾಂಕ ಬಿಡುಗಡೆ

ಮರಿತಿಬ್ಬೇಗೌಡ ಅವರ ಮಾತಿಗೆ ಸಭಾನಾಯಕ ಕೋಟ ಶ್ರೀನಿವಾಸ ಪೂಜಾರಿ, ಗೃಹ ಸಚಿವ ಆರಗ ಜ್ಞಾನೇಂದ್ರ, ವೈ.ಎ. ನಾರಾಯಣಸ್ವಾಮಿ, ಎನ್‌. ರವಿಕುಮಾರ್‌ ಮುಂತಾದವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

Teachers Transfer: ಡಿ.28 ರಿಂದ ಫೆ.28ರವರೆಗೆ ಶಿಕ್ಷಕರ ವರ್ಗಾವರ್ಗಿ

ಈ ಮಧ್ಯೆ ಕಾಂಗ್ರೆಸ್‌ ಸದಸ್ಯರು ಮರಿತಿಬ್ಬೇಗೌಡ ಅವರಿಗೆ ಬೆಂಬಲ ವ್ಯಕ್ತಪಡಿಸಿ ಧರಣಿಯಲ್ಲಿ ಭಾಗಿಯಾದರು. ಸಭಾಪತಿ ಹೊರಟ್ಟಿಅವರು ಸರ್ಕಾರದಿಂದ ನಿರ್ದಿಷ್ಟಪಡಿಸಿದ ರೀತಿಯಲ್ಲಿ ಉತ್ತರ ಕೊಡುವಂತೆ ನನಗೆ ಸೂಚಿಸಲು ಬರುವುದಿಲ್ಲ. ಈ ರೀತಿ ಧರಣಿ ಮಾಡುವುದು ಸರಿಯಲ್ಲ ಎಂದರು. ಇದಕ್ಕೆ ಪ್ರತಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್‌ ಅವರು ಗಂಭೀರವಾದ ವಿಷಯವನ್ನು ಮರಿತಿಬ್ಬೇಗೌಡ ಅವರು ಹೇಳಿದ್ದಾರೆ ಹಾಗಾಗಿ ಅವರಿಗೆ ಸರಿಯಾದ ಉತ್ತರ ಕೊಡಬೇಕು ಎಂದು ಉತ್ತರಿಸಿದರು.

Latest Videos
Follow Us:
Download App:
  • android
  • ios