ನಾಗೇಂದ್ರ ಆತ್ಮಹತ್ಯೆ : ಮೈಸೂರು ಜಿಪಂ ಸಿಇಒ ವರ್ಗಾವಣೆ
ನಂಜನಗೂಡು ಆರೋಗ್ಯಾಧಿಕಾರಿ ನಾಗೇಂದ್ರ ಆತ್ಮಹತ್ಯೆ ಬೆನ್ನಲ್ಲೇ ಜಿಲ್ಲಾ ಪಂಚಾಯತ್ ಸಿಇಒ ಪ್ರಶಾಂತ್ ಮಿಶ್ರಾ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಮೈಸೂರು (ಆ.24): ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೈಸೂರು ಜಿಪಂ ಸಿಇಒ ಪ್ರಶಾಂತ್ಕುಮಾರ್ ಮಿಶ್ರಾರನ್ನು ರಾಜ್ಯ ಸರ್ಕಾರ ಭಾನುವಾರ ವರ್ಗಾವಣೆ ಮಾಡಿದ್ದು, ಯಾವುದೇ ಸ್ಥಳ ನಿಯುಕ್ತಿ ಮಾಡಿಲ್ಲ. ಹಾಗೆಯೇ, ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ಅವರಿಗೆ ಜಿಪಂ ಸಿಇಒ ಹೆಚ್ಚುವರಿ ಜವಾಬ್ದಾರಿಯನ್ನು ಸರ್ಕಾರ ವಹಿಸಿದೆ.
"
ಸಿಇಒ ವಿರುದ್ಧ ಎಫ್ಐಆರ್: ಜಿಪಂ ಸಿಇಒ ಮಿಶ್ರಾ ಅವರ ಒತ್ತಒ, ಕಿರುಕುಳದಿಂದಲೇ ತಮ್ಮ ಪುತ್ರ ಡಾ.ಎಸ್.ಆರ್.ನಾಗೇಂದ್ರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಡಾ. ನಾಗೇಂದ್ರ ಅವರ ತಂದೆ ಟಿ.ಎಸ್.ರಾಮಕೃಷ್ಣ ದೂರು ನೀಡಿದ್ದಾರೆ. ಈ ಸಂಬಂಧ ಆಲನಹಳ್ಳಿ ಠಾಣೆಯಲ್ಲಿ ಜಿಪಂ ಸಿಇಒ ವಿರುದ್ಧ ಪ್ರಕರಣ ದಾಖಲಾಗಿದೆ.
ವೈದ್ಯರಿಗೆ ಟಾರ್ಗೆಟ್ ಫಿಕ್ಸ್ ಮಾಡುವುದು ಸರಿಯಲ್ಲ' ವೈದ್ಯರ ಆಗ್ರಹ.
ಇಂದಿನಿಂದ ಕಪ್ಪುಪಟ್ಟಿ ಧರಿಸಿ ವೈದ್ಯರಿಂದ ಸೇವೆ
ಮೈಸೂರು: ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಆತ್ಮಹತ್ಯೆ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಆವರಣದಲ್ಲಿ 4 ದಿನಗಳಿಂದ ನಡೆಯುತ್ತಿದ್ದ ಮುಷ್ಕರವನ್ನು ಕೈಬಿಟ್ಟಿರುವ ವೈದ್ಯರು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ವರೆಗೆ ಸೋಮವಾರದಿಂದ ಕೈಗೆ ಕಪ್ಪುಪಟ್ಟಿಧರಿಸಿ ಕರ್ತವ್ಯ ನಿರ್ವಹಿಸಲು ನಿರ್ಧರಿಸಿದ್ದಾರೆ.
ಈ ಮಧ್ಯೆ, ಆರೋಗ್ಯಾಧಿಕಾರಿ ಆತ್ಮಹತ್ಯೆ ಪ್ರಕರಣದಲ್ಲಿ ಜಿಪಂ ಸಿಇಒ ಪ್ರಶಾಂತ್ಕುಮಾರ್ ಮಿಶ್ರಾ ವರ್ಗಾವಣೆಗೆ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದಿಂದ ವಿರೋಧ ವ್ಯಕ್ತವಾಗಿದೆ. ಮಿಶ್ರಾರನ್ನು ವರ್ಗಾವಣೆ ಸರಿಯಲ್ಲ. ಕೂಡಲೇ ವರ್ಗಾವಣೆ ರದ್ದುಗೊಳಿಸಬೇಕು ಎಂದು ಸಂಘದ ಜಿಲ್ಲಾಧ್ಯಕ್ಷ ಎಂ.ಡಿ. ಮಾಯಪ್ಪ ಆಗ್ರಹಿಸಿದ್ದಾರೆ.
'IAS, KAS ಅಧಿಕಾರಿಗಳಿಗೆ ಮೆಡಿಕಲ್ ಗಾಳಿ ಗಂಧ ಗೊತ್ತಿಲ್ಲ, ಅವರ ಮಧ್ಯ ಪ್ರವೇಶ ಬೇಡ'..
ಡಾ. ನಾಗೇಂದ್ರ ಆತ್ಮಹತ್ಯೆ ವಿಚಾರದಲ್ಲಿ ಮಿಶ್ರಾರ ಹೆಸರು ಎಳೆದು ತಂದು, ನಿಂದಿಸುತ್ತಿರುವುದು ಇಲಾಖೆಯ ಸಿಬ್ಬಂದಿ, ಅಧಿಕಾರಿಗಳಿಗೆ ನೋವುಂಟಾಗಿದೆ. ಡಾ. ನಾಗೇಂದ್ರರ ಆತ್ಮಹತ್ಯೆಗೆ ಕಾರಣವಾದವರ ವಿರುದ್ಧ ಕಾನೂನು ಕ್ರಮಕ್ಕೆ ಯಾರ ವಿರೋಧವೂ ಇಲ್ಲ. ಆದರೆ, ತನಿಖೆ ಮಾಡಿ