Asianet Suvarna News Asianet Suvarna News

ದಸರಾ ಹಿನ್ನೆಲೆ ಅರಮನೆ ಪ್ರವೇಶ ನಿಷೇಧ

ಮೈಸೂರು ದಸರಾ ಪ್ರಯುಕ್ತ ಮೈಸೂರು ರಾಜ ಮನೆತನದವರು ದಸರಾ ಮಹೋತ್ಸವ- 2023ರ ನಿಮಿತ್ತ ಧಾರ್ಮಿಕ ಪೂಜಾ ಕೈಂಕರ್ಯ ನಡೆಸುವುದರಿಂದ ಸಾರ್ವಜನಿಕರಿಗೆ ಆ ಅವಧಿಯಲ್ಲಿ ಅರಮನೆ ಪ್ರವೇಶ ನಿಷೇಧಿಸಲಾಗಿದೆ.

Mysuru  Dasara 2023  palace entry ban snr
Author
First Published Oct 7, 2023, 10:49 AM IST

 ಮೈಸೂರು :  ಮೈಸೂರು ದಸರಾ ಪ್ರಯುಕ್ತ ಮೈಸೂರು ರಾಜ ಮನೆತನದವರು ದಸರಾ ಮಹೋತ್ಸವ- 2023ರ ನಿಮಿತ್ತ ಧಾರ್ಮಿಕ ಪೂಜಾ ಕೈಂಕರ್ಯ ನಡೆಸುವುದರಿಂದ ಸಾರ್ವಜನಿಕರಿಗೆ ಆ ಅವಧಿಯಲ್ಲಿ ಅರಮನೆ ಪ್ರವೇಶ ನಿಷೇಧಿಸಲಾಗಿದೆ.

ಅ. 9 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆವರೆಗೆ ಸಿಂಹಾಸನ ಜೋಡಣೆ, ಅ. 15 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಖಾಸಗಿ ದರ್ಬಾರ್‌ ನಲ್ಲಿ ರಾಜ ವಂಶಸ್ಥರ ಪೂಜಾ ಕೈಂಕರ್ಯ, ಅ. 23 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆವರೆಗೆ ಆಯುಧ ಪೂಜೆ ಪ್ರಯುಕ್ತ ಹಾಗೂ ಅ. 24 ರಂದು ವಿಜಯದಶಮಿ ಪ್ರಯುಕ್ತ ಸಂಪೂರ್ಣ ದಿನ ಅರಮನೆಗೆ ಪ್ರವೇಶ ಇರುವುದಿಲ್ಲ.

ನ. 8 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆವರೆಗೆ ಸಿಂಹಾಸನ ವಿಸರ್ಜನೆ ಪ್ರಯುಕ್ತ ಪ್ರವಾಸಿಗರಿಗೆ ಅರಮನೆ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಮೈಸೂರು ಅರಮನೆ ಮಂಡಳಿ ಕಾರ್ಯ ನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.

ವಿಶ್ವವಿಖ್ಯಾತ ಮೈಸೂರು ದಸರಾ 2023ಕ್ಕೆ ದಿನಗಣನೆ

ಮೈಸೂರು (ಅ.05): ವಿಶ್ವವಿಖ್ಯಾತ ಮೈಸೂರು ದಸರಾ 2023ಕ್ಕೆ ದಿನಗಣನೆ ಶುರುವಾಗಿದೆ. ಅರಮನೆಯಲ್ಲಿ ದಸರಾ ಪರಂಪರೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಅರಮನೆಯಲ್ಲಿ ನಡೆಯುವ ದಸರಾ ಪೂಜಾ ಕಾರ್ಯಕ್ರಮಗಳ ಪಟ್ಟಿ ಇದೀಗ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಲಭ್ಯವಾಗಿದ್ದು, ಇಂತಿವೆ. ಅ.9 ರಂದು ರತ್ನ ಖಚಿತ ಸಿಂಹಾಸನ ಜೋಡಣೆ ಆಗಲಿದೆ. ಬೆಳಗ್ಗೆ 7 ಗಂಟೆಗೆ ನವಗ್ರಹ ಹೋಮ ಸೇರಿ ಹಲವು ಪೂಜಾ ವಿಧಿ ವಿಧಾನಗಳು ನಡೆಯಲಿದೆ. ಬಳಿಕ ಬೆಳಗ್ಗೆ 10:05 ರಿಂದ 10:35ರ ಶುಭ ಲಗ್ನದಲ್ಲಿ ಸಿಂಹಾಸನ ಜೋಡಣೆ ಆಗಲಿದೆ. 

ಬಳಿಕ ಗೋಶಾಲೆಗೆ ಪಟ್ಟದ ಆನೆ, ಪಟ್ಟದ ಕುದುರೆ ಹಾಗೂ ಪಟ್ಟದ ಹಸು ಆಗಮಿಸಲಿವೆ. ಅ.15 ರಂದು 6 ಗಂಟೆಯಿಂದ 6:25ರ ವರೆಗೆ ಶುಭ ಮುಹೂರ್ತದಲ್ಲಿ ಸಿಂಹ ಜೋಡಣೆ ಮಾಡಲಾಗುತ್ತದೆ. ಬೆಳಗ್ಗೆ 07:05 ರಿಂದ 7:45ರ ಶುಭ ಲಗ್ನದಲ್ಲಿ ಕಂಕಣ ಧಾರಣೆ ನಡೆಯಲಿದೆ. ಈ ವೇಳೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಅವರ ಪತ್ನಿ ತ್ರಿಷಿಕಾ ಕುಮಾರಿಗೆ ಕಂಕಣ ಧಾರಣೆ ನಡೆಯಲಿದೆ. ಬಳಿಕ 9:45ಕ್ಕೆ ಅರಮನೆ ಸವಾರಿ ತೊಟ್ಟಿಗೆ ಪಟ್ಟದ ಆನೆ, ಪಟ್ಟದ ಕುದುರೆ ಮತ್ತು ಪಟ್ಟದ ಹಸು ಆಗಮಿಸಲಿವೆ. ಬೆಳಗ್ಗೆ 10:15ಕ್ಕೆ ಕಳಸ ಪೂಜೆ ಹಾಗೂ ಸಿಂಹಾಸನ ಪೂಜೆ ನೆರವೇರಲಿದೆ. 

ತಮಿಳ್ನಾಡಿನ 40 ಎಂಪಿ ಸೀಟಿಗಾಗಿ ರಾಜ್ಯವನ್ನೇ ಅಡವಿಟ್ಟ ಕಾಂಗ್ರೆಸ್‌: ಎಚ್.ಡಿ.ರೇವಣ್ಣ

ಇದಾದ ಬಳಿಕ ಬೆಳಗ್ಗೆ 11:30ರಿಂದ 11:50ಕ್ಕೆ ಖಾಸಗಿ ದರ್ಬಾರ್ ನಡೆಯಲಿದೆ. ಅಂದು ಮಧ್ಯಾಹ್ನ 1:45 ರಿಂದ 02:05ರ ಅವಧಿಯಲ್ಲಿ ತಾಯಿ ಚಾಮುಂಡೇಶ್ವರಿಯನ್ನು ಚಾಮುಂಡಿ ತೊಟ್ಟಿಯಿಂದ ಕನ್ನಡಿ ತೊಟ್ಟಿಗೆ ರವಾನೆ ಮಾಡಲಾಗುತ್ತದೆ. ಅ.20 ರಂದು 10:05 ರಿಂದ 10:25ಕ್ಕೆ ಸರಸ್ವತಿ ಪೂಜೆ, ಅ.21 ರಂದು ಕಾಳರಾತ್ರಿ ಪೂಜೆ, ಅ.22 ರಂದು ದುರ್ಗಾಷ್ಠಮಿ ಪೂಜೆ, ಅ.23 ರಂದು ದುರ್ಗಾಷ್ಠಮಿ ಪೂಜೆ ನಡೆಯಲಿದೆ. ಅದೇ ದಿನ ಬೆಳಗ್ಗೆ 5:30ಕ್ಕೆ ಚಂಡಿಹೋಮದೊಂದಿಗೆ ಪೂಜೆ ಆರಂಭವಾಗಲಿದೆ. ಆ ಸಮಯದಲ್ಲಿ ಆನೆ ಬಾಗಿಲಿಗೆ ಪಟ್ಟದ ಆನೆ, ಪಟ್ಟದ ಕುದುರೆ ಹಾಗೂ ಪಟ್ಟದ ಹಸು ಆಗಮಿಸಲಿವೆ.

ಬಳಿಕ ಬೆಳಗ್ಗೆ 6:05 ರಿಂದ 06:15ಕ್ಕೆ ಖಾಸಾ ಆಯುಧಗಳು ಅರಮನೆ ಕೋಡಿ ಸೋಮೇಶ್ವರ ದೇಗುಲಕ್ಕೆ ರವಾನೆ ಆಗಲಿವೆ. ಬೆಳಗ್ಗೆ 07:15ಕ್ಕೆ ಖಾಸಾ ಆಯುಧಗಳು ಕೋಡಿ ಸೋಮೇಶ್ವರ ದೇಗುಲದಿಂದ ಅರಮನೆಗೆ ವಾಪಸ್ ತರಲಾಗುತ್ತದೆ. ಬೆಳಗ್ಗೆ 9:30ಕ್ಕೆ ಚಂಡಿಹೋಮ ಪೂರ್ಣಾಹುತಿ ನಡೆಯಲಿದೆ. ಬೆಳಗ್ಗೆ 11:45ಕ್ಕೆ ಕಲ್ಯಾಣ ಮಂಟಪಕ್ಕೆ ಪಟ್ಟದ ಆನೆ, ಪಟ್ಟದ ಕುದುರೆ ಹಾಗೂ ಪಟ್ಟದ ಹಸು ಬರಲಿವೆ. ಬಳಿಕ ಮಧ್ಯಾಹ್ನ 12:20ಕ್ಕೆ ಆಯುಧಪೂಜೆ ಆರಂಭವಾಗಲಿದೆ. 

ಈ ವೇಳೆ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದ ಆಯುಧಗಳಿಗೆ ಪೂಜೆ ನಡೆಯಲಿದೆ. ಬಳಿಕ ಸಂಜೆ ಖಾಸಗಿ ದರ್ಬಾರ್ ಇರಲಿದೆ. ನಂತರ ಸಿಂಹ ವಿಸರ್ಜನೆ, ವಾಣಿ ವಿಲಾಸ ದೇವರ ಮನೆಯಲ್ಲಿ ಕಂಕಣ ವಿಸರ್ಜನೆ ಆಗಲಿದೆ. ಅಂಬಾವಿಲಾಸದಲ್ಲಿ ದಪ್ತಾರ್ ಪೂಜೆ ಮಾಡಿ, ಮಹಾಸನ್ನಿಧಾನದಲ್ಲಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಅಮಲದೇವಿ ದರ್ಶನ ಪಡೆಯಲಿದ್ದಾರೆ. 

Follow Us:
Download App:
  • android
  • ios