ಖಾಸಗಿ ದರ್ಬಾರ್ ಕುಟುಂಬಕ್ಕಷ್ಟೇ ಸೀಮಿತ : ಪ್ರಮೋದಾದೇವಿ
ಈ ಬಾರಿ ನಡೆಯಲಿರುವ ಮೈಸೂರು ದಸರಾ ಕಾರ್ಯಕ್ರಮದ ಖಾಸಗಿ ದರ್ಬಾರಿಗೆ ರಾಜವಂಶಸ್ಥರಿಗಷ್ಷ್ಟೇ ಅವಕಾಶ ಎಂದು ಪ್ರಮೋದ ದೇವಿ ಒಡೆಯರ್ ಹೇಳಿದ್ದಾರೆ
ಮೈಸೂರು (ಅ.06): ಕೋವಿಡ್-19ರ ಹಿನ್ನೆಲೆಯಲ್ಲಿ ಈ ಬಾರಿ ದಸರೆ ಸಂದರ್ಭದಲ್ಲಿ ಖಾಸಗಿ ದರ್ಬಾರ್ ಮತ್ತಿತರ ಪೂಜಾವಿಧಿವಿಧಾನಗಳು ಸಂಪ್ರದಾಯಕ್ಕೆ ಸೀಮಿತವಾಗಿರುತ್ತವೆ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಸ್ಪಷ್ಟಪಡಿಸಿದ್ದಾರೆ.
ಮುನ್ನೆಚ್ಚರಿಕೆ ಕ್ರಮ ಅತಿ ಅವಶ್ಯಕವಾಗಿರುವುದರಿಂದ ಆಚರಣೆಯಲ್ಲಿ ಕುಟುಂಬ ಸದಸ್ಯರನ್ನೂ ಒಳಗೊಂಡಂತೆ ಸಾರ್ವಜನಿಕರು ಹಾಗೂ ಮಾಧ್ಯಮಗಳ ಭಾಗವಹಿಸುವಿಕೆ ಇರುವುದಿಲ್ಲ.
ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಈ ಕ್ರಮ ಅನಿವಾರ್ಯವಾಗಿದೆ. ಎಲ್ಲರಿಂದ ಸಂಪೂರ್ಣ ಸಹಕಾರ ನಿರೀಕ್ಷಿಸುತ್ತೇನೆ ಎಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
'ದಸರೆಗೆ ಹೋಗಬೇಕಂದ್ರೆ 5 ದಿನ ಮುಂಚೆ ಕೋವಿಡ್ ಟೆಸ್ಟ್ ಅಗತ್ಯ' .
ಈ ಬಾರಿ ಕೊರೋನಾ ಹಿನ್ನೆಲೆಯಲ್ಲಿ ದಸರಾಗೆ ಸೂಕ್ತ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದ್ದು ವಿವಿಧ ರೀತಿಯ ನಿಯಮಗಳನ್ನು ರೂಪಿಸಲಾಗಿದೆ.
ದಸರಾ ಜಂಬೂ ಸವಾರಿಗೆ 2000 ಸಾವಿರ ಜನರಿಗಷ್ಟೇ ಅವಕಾಶ ನೀಡಲಾಗಿದೆ. ಅಲ್ಲದೇ ದಸರಾಗೆ ಆಗಮಿಸುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯವಾಗಿದೆ.