ರಾಜ್ಯದಲ್ಲಿ ಸಂಪುಟ ವಿಸ್ತರಣೆ ಚರ್ಚೆಗಳು ಜೋರಾಗಿವೆ. ಇದೇ ವೇಳೆ ಆಕಾಂಕ್ಷಿಗಳ ಸಮಖ್ಯೆಯೂ ಹೆಚ್ಚಾಗಿದೆ. ಅನೇಕ ಮುಖಂಡರು ಈಗಾಗಲೇ ಸಚಿವ ಸ್ಥಾನಕ್ಕಾಗಿ ಈಗಾಗಲೇ ಬೇಡಿಕೆ ಇಡುತ್ತಿದ್ದಾರೆ

ಹಾವೇರಿ (ಸೆ.30): ಸಚಿವ ಸಂಪುಟದಲ್ಲಿ ಕೆಲವರು ಕೆಲಸ ಮಾಡದವರಿದ್ದು, ಅಂಥವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ಮಾಡಿಕೊಡಬೇಕು ಎಂದು ಹಾವೇರಿ ಶಾಸಕ ನೆಹರು ಓಲೇಕಾರ ಆಗ್ರಹಿಸಿದ್ದಾರೆ. ಸಚಿವ ಸಂಪುಟ ವಿಸ್ತರಣೆ, ಪುನಾರಚನೆ ಕುರಿತು ಮಾತುಕತೆ ನಡೆಯುತ್ತಿವೆ.

Add Asianetnews Kannada as a Preferred SourcegooglePreferred

 ಸಂಪುಟ ಪುನಾರಚನೆಯಾದರೆ ನಮಗೂ ಅವಕಾಶ ಸಿಗಬಹುದು. ಪರಿಶಿಷ್ಟಜಾತಿಯ ಬಲಗೈ ಸಮುದಾಯದಿಂದ ನಾನು ಮೂರು ಬಾರಿ ಆಯ್ಕೆಯಾಗಿದ್ದೇನೆ. ಆದ್ದರಿಂದ ನನಗೂ ಸಂಪುಟದಲ್ಲಿ ಅವಕಾಶ ಮಾಡಿಕೊಡುತ್ತಾರೆ ಎಂಬ ವಿಶ್ವಾವಿದೆ ಎಂದಿ​ದ್ದಾರೆ.

ಶಿರಾಕ್ಕೆ ಕೈ ಅಭ್ಯರ್ಥಿ ಟಿಬಿಜೆ; ಬಿಜೆಪಿ, ದಳದಿಂದ ಯಾರು? ...

ಸಂಪುಟದಲ್ಲಿ ಬಹಳ ಜನ ಕೆಲಸ ಮಾಡದೆ ಇರುವವರು ಇದ್ದಾರೆ. ಇದು ಮುಖ್ಯಮಂತ್ರಿಗಳಿಗೆ, ಹೈಕಮಾಂಡ್‌, ಹಾಗೂ ರಾಜ್ಯಾಧ್ಯಕ್ಷರಿಗೂ ಗೊತ್ತಿದೆ. ಈ ನಿಟ್ಟಿನಲ್ಲಿ ಅಂಥವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ಮಾಡಿಕೊಡಬೇಕು. ಇದರಿಂದ ಮುಂದಿನ ಮೂರು ವರ್ಷ ಸರ್ಕಾರ ಸುಸೂತ್ರವಾಗಿ ನಡೆಸಲು ಅನುಕೂಲವಾಗುತ್ತದೆ ಎಂದರು.