ಹೊಸ ಜಾತಿಯ ಸಿಹಿ ನೀರಿನ ಏಡಿಯೊಂದು ಮಧ್ಯ ಪಶ್ವಿಮ ಘಟ್ಟದ ಭಾಗವಾದ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ಪತ್ತೆಯಾಗಿದೆ. 

ಯಲ್ಲಾಪುರ (ಫೆ.14) : ಹೊಸ ಜಾತಿಯ ಸಿಹಿ ನೀರಿನ ಏಡಿಯೊಂದು ಮಧ್ಯ ಪಶ್ವಿಮ ಘಟ್ಟದ ಭಾಗವಾದ ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ಪತ್ತೆಯಾಗಿದೆ. 

Add Asianetnews Kannada as a Preferred SourcegooglePreferred

ನಿಸರ್ಗ ತಜ್ಞ ಗೋಪಾಲಕೃಷ್ಣ ಹೆಗಡೆ(Gopalkrishna Hegde), ಅರಣ್ಯ ಇಲಾಖೆ(Forest depertment)ಯ ಸಿಬ್ಬಂದಿ ಪರಶುರಾಮ ಭಜಂತ್ರಿ(Parashuram Bhajantri) ಮತ್ತು ಪುಣೆಯ ಪ್ರಾಣಿ ಸರ್ವೇಕ್ಷಣಾಲಯದ ಸಮೀರಕುಮಾರ ಪಾಟಿ ತಂಡ ಈ ವೇಲಾ ಪ್ರಭೇದದ ಹೊಸ ಜಾತಿಯ ಸಿಹಿನೀರಿನ ಏಡಿ(Crab)ಯನ್ನು ಪತ್ತೆ ಹಚ್ಚಿದ್ದು, ಇದಕ್ಕೆ 'ವೇಲಾ ಬಾಂಧವ್ಯ'(Vela bandhavya) ಎಂದು ಹೆಸರಿಟ್ಟಿದ್ದಾರೆ. 

ಪಶ್ಚಿಮಘಟ್ಟದಲ್ಲಿ ಘಟಿಯಾನ ದ್ವಿವರ್ಣ ಏಡಿ ಪತ್ತೆ

ಹಳದಿ ಮತ್ತು ಕೇಸರಿ ಮಿಶ್ರಿತ ಮೈಬಣ್ಣದ ಈ ಏಡಿಯು ಮಳೆಗಾಲದಲ್ಲಿ ತೋಟ, ಗದ್ದೆಗಳಲ್ಲಿ ಕಾಣಸಿಗುತ್ತವೆ. ಸಮತಟ್ಟಾದ ಜಾಗದ ಮಣ್ಣಿನಲ್ಲಿ ಸುಮಾರು ಒಂದರಿಂದ ಒಂದೂವರೆ ಅಡಿಯಷ್ಟು ಆಳದಲ್ಲಿ ರಂಧ್ರ‌ ಕೊರೆದು ಇದು ವಾಸ ಮಾಡುತ್ತದೆ. ಸುಮಾರು ನಾಲ್ಕು ಇಂಚು ಅಗಲ, ಮೂರೂವರೆ ಇಂಚು ಉದ್ದವಿರುವ ಈ ಏಡಿಯ ತಲೆಯಿಂದ ಬೆನ್ನಿನ ಮೇಲೆ ಕಪ್ಪು ಬಣ್ಣದ ಪತಂಗದಂಥ ಆಕಾರವಿದೆ. 

ನಿಸರ್ಗ ತಜ್ಞ ಗೋಪಾಲಕೃಷ್ಣ ಹೆಗಡೆಯವರ ಯಲ್ಲಾಪುರ ತಾಲೂಕಿನ ಬಾರೆಯಲ್ಲಿರುವ ತೋಟದಲ್ಲಿ ಈ ಏಡಿ ಪತ್ತೆಯಾಗಿದ್ದು, ವೇಲಾ ಕುಲಕ್ಕೆ ಸೇರಿದ ನಾಲ್ಕನೇ ಪ್ರಭೇದ ಇದಾಗಿದೆ. ವೇಲಾ ಕುಲದ ಕರ್ಲಿ, ಪುಲ್ವಿನಾಟ, ವಿರೂಪ ಎಂಬ ಮೂರೂ ಪ್ರಭೇದಗಳು ಕೇರಳದ ಕರಾವಳಿಯಲ್ಲಿ ಈ ಮೊದಲು ಪತ್ತೆಯಾಗಿದ್ದು, ನಾಲ್ಕನೇ ಪ್ರಭೇದ ಈ ವೇಲಾ ಬಾಂಧವ್ಯ ಆಗಿದೆ. 

ಅಂದಹಾಗೆ, ಬಾರೆಯಲ್ಲಿ ಪತ್ತೆಯಾಗಿರುವ ಈ ಏಡಿಗೆ ಇಟ್ಟಿರುವ ಹೆಸರು ವಿಶೇಷವಾಗಿದ್ದು, ಈ ಏಡಿಯನ್ನು ಗುರುತು ಮಾಡಿರುವ ಗೋಪಾಲಕೃಷ್ಣ ಹೆಗಡೆಯವರ ಮಗಳ ಹೆಸರು ಬಾಂಧವ್ಯ ಹೆಗಡೆ(Bandhavya hegde)ಯವರ ಹೆಸರೇ ಈ ಏಡಿಗಿರಿಸಲಾಗಿದೆ. ಬಾಂಧವ್ಯ ಬಾರೆಯ ಸರ್ಕಾರಿ ಶಾಲೆಯಲ್ಲಿ ಐದನೇ ತರಗತಿ ಓದುತ್ತಿದ್ದು, ಅವರದ್ದೇ ತೋಟದಲ್ಲಿ ಈ ಏಡಿ ಪತ್ತೆಯಾಗಿರುವ ಕಾರಣ ಅವರ ಮಗಳ ಹೆಸರನ್ನೇ ಏಡಿಗೆ ನಾಮಕರಣ ಮಾಡಲಾಗಿದೆ.

ಸಮುದ್ರ ಆಳದಲ್ಲಿ 14 ಕಾಲಿನ ಹೊಸ ಜೀವಿ ಪತ್ತೆ!

ಬಹುತೇಕ ಹೊಸ ಜೀವಿಗಳಿಗೆ ಲ್ಯಾಟಿನ್ ಹೆಸರುಗಳನ್ನು ಇಡುವ ಕಾರಣ ಸಾಮಾನ್ಯ ಜನರು ಕೂಡಾ ನೆನಪಿನಲ್ಲಿಡಲು ಈ ಹೆಸರನ್ನು ಆಯ್ಕೆ ಮಾಡಲಾಗಿದೆ.