445 ಕೋಟಿ ರು. ಅಂದಾಜು ವೆಚ್ಚದಲ್ಲಿ ಪಂಪ್ವೆಲ್ ಬಳಿ ಖಾಸಗಿ ಬಸ್ ನಿಲ್ದಾಣ ನಿರ್ಮಾಣ ಪ್ರಸ್ತಾವನೆಯನ್ನು ಅನುಮೋದನೆಗಾಗಿ ಸಂಪುಟದ ಮುಂದೆ ಇಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಹೇಳಿದ್ದಾರೆ.
ಮಂಗಳೂರು(ಮಾ.01): 445 ಕೋಟಿ ರು. ಅಂದಾಜು ವೆಚ್ಚದಲ್ಲಿ ಪಂಪ್ವೆಲ್ ಬಳಿ ಖಾಸಗಿ ಬಸ್ ನಿಲ್ದಾಣ ನಿರ್ಮಾಣ ಪ್ರಸ್ತಾವನೆಯನ್ನು ಅನುಮೋದನೆಗಾಗಿ ಸಂಪುಟದ ಮುಂದೆ ಇಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಹೇಳಿದ್ದಾರೆ.
Add Asianetnews Kannada as a Preferred Source

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಶನಿವಾರ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ನಡೆಸಿ ನಂತರ ಮಾತನಾಡಿದ ಅವರು, ಮುಂದಿನ ಸಚಿವ ಸಂಪುಟದಲ್ಲಿ ಈ ಪ್ರಸ್ತಾವನೆ ಬರಲಿದೆ ಎಂದು ಭರವಸೆ ನೀಡಿದ್ದಾರೆ.
ಮೀನುಗಾರರಿಗೆ ಬಂಪರ್: ಸೀಮೆ ಎಣ್ಣೆ ವಿತರಣೆಯಲ್ಲಿ ಹೆಚ್ಚಳ.?
2017-18ರ ಎಸ್ಎಫ್ಸಿ ಅನುದಾನದಡಿ 40 ಕಾಮಗಾರಿಗಳು ಇನ್ನೂ ಪೂರ್ಣಗೊಂಡಿಲ್ಲ ಎಂದು ಪಾಲಿಕೆಯ ಸೂಪರಿಂಟೆಂಡೆಂಟ್ ಎಂಜಿನಿಯರ್ ಗಣೇಶ್ ತಿಳಿಸಿದಾಗ, ಸಚಿವರು ಅವರನ್ನು ಕಾರ್ಯಕ್ಕೆ ತೆಗೆದುಕೊಂಡರು. ಮಾಚ್ರ್ 31 ರೊಳಗೆ ಕಾಮಗಾರಿ ಪೂರ್ಣಗೊಳಿಸುವುದಾಗಿ ಅಧಿಕಾರಿ ಭರವಸೆ ನೀಡಿದರು.
