ನಿಖಿಲ್ ಕುಮಾರಸ್ವಾಮಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದ್ದು ನಡೆದುಕೊಂಡೇ ಹೋಗಿದ್ದಾರೆ
ಕನಕಪುರ (ನ.11): ತಾಲೂಕಿನ ಮರಳವಾಡಿ ಹೋಬಳಿಯ ವಿವಿಧ ಹಳ್ಳಿಗಳಿಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿ ಪರಿಹಾರದ ಭರವಸೆ ನೀಡಿದರು.
Add Asianetnews Kannada as a Preferred Source

ಶಿವನಹಳ್ಳಿದೊಡ್ಡಿ ಗ್ರಾಮದಲ್ಲಿ ಅರ್ಧಕ್ಕೆ ನಿಂತಿರುವ ಸೇತುವೆ ಕಾಮಗಾರಿ ವೀಕ್ಷಿಸಿದ ನಿಖಿಲ್ ಅವರು, ಆದಷ್ಟುಬೇಗ ಸೇತುವೆ ನಿರ್ಮಿಸಿ ಜನರ ಓಡಾಟಕ್ಕೆ ಅನುಕೂಲ ಮಾಡಿಕೊಡುವುದಾಗಿ ತಿಳಿಸಿದರು.
ಸೇತುವೆ ಬಳಿ ಭೇಟಿ ನೀಡಿದ ನಿಖಿಲ್ ಅವರನ್ನು ಗ್ರಾಮಸ್ಥರು ಗ್ರಾಮಕ್ಕೆ ಭೇಟಿ ನೀಡಬೇಕೆಂದು ಪಟ್ಟುಹಿಡಿದು ನಾವು ದಿನನಿತ್ಯ ಪಡುವ ಕಷ್ಟವನ್ನು ಅವರಿಗೆ ಮನವರಿಕೆ ಮಾಡುವ ಪ್ರಯತ್ನ ಮಾಡಿದರು.
ಜನರ ಮನವಿಗೆ ಸ್ಪಂದಿಸಿದ ನಿಖಿಲ್ ಹಳ್ಳವನ್ನು ದಾಟಿ ಸುಮಾರು 1 ಕಿ.ಮೀ. ನಡೆದುಕೊಂಡು ಹೋಗಿ ಗ್ರಾಮದ ಜನರ ಸಮಸ್ಯೆ ಆಲಿಸಿ ಮುಂದಿನ ದಿನಗಳಲ್ಲಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿದರು.
