ನಿಖಿಲ್ ಕುಮಾರಸ್ವಾಮಿಗೆ ಇದೀಗ ಹೊಸ ಜವಾಬ್ದಾರಿ ವಹಿಸಲು ಮುಖ್ಯಮಂತ್ರಿ ಕುಮಾರಸ್ವಾಮಿ ಸಜ್ಜಾಗಿದ್ದಾರೆ. 

ಕೋಲಾರ (ಡಿ.10): ಮುಂದಿನ ದಿನಗಳಲ್ಲಿ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಪಕ್ಷ ಸಂಘಟನೆಯ ಹೊಣೆಗಾರಿಕೆಯನ್ನು ಪುತ್ರ ನಿಖಿಲ್‌ ಕುಮಾರಸ್ವಾಮಿಗೆ ವಹಿಸುವುದಾಗಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಗರ ಹೊರವಲಯದ ಖಾಸಗಿ ಕಲ್ಯಾಣ ಮಂಟಪದಲ್ಲಿ ಗ್ರಾಪಂ ಚುನಾವಣೆ ಸಂಬಂಧ ಬುಧವಾರ ನಡೆದ ಜೆಡಿಎಸ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ ಈ ವಿಚಾರ ತಿಳಿಸಿದರು. ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿಗೆ ಈ ಭಾಗದಲ್ಲಿ ಪಕ್ಷ ಸಂಘಟನೆಯ ಜವಾಬ್ದಾರಿ ನೀಡಲಾಗುವುದು. 

' ಸೋತಿರುವ ನಿಖಿಲ್‌ಗೆ ಮಂಡ್ಯದಿಂದಲೇ ಭರ್ಜರಿ ಗೆಲುವು' ..

ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಜೆಡಿಎಸ್‌ ಬಹುಮತ ಪಡೆಯುವುದು ನನ್ನ ಕೊನೇ ಆಸೆ. ಈ ನಿಟ್ಟಿನಲ್ಲಿ ತಾಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯ್ತಿ ಚುನಾವಣೆಯಲ್ಲಿ ಬಹುಮತ ಪಡೆಯಬೇಕು. ಇಡೀ ದೇಶದಲ್ಲಿ ಇನ್ಮುಂದೆ ಕಾಂಗ್ರೆಸ್‌ ಪಕ್ಷ ಸ್ವತಂತ್ರವಾಗಿ ಅಧಿಕಾರಕ್ಕೆ ಬರುವುದಿಲ್ಲ. ನಮಗೆ ಸ್ವತಂತ್ರವಾಗಿ ಅಧಿಕಾರ ನಡೆಸಲು ಬಹುಮತ ಸಿಕ್ಕರೆ ರಾಜ್ಯದಲ್ಲಿ ಸಾಕಷ್ಟುಬದಲಾವಣೆ ಆಗಲಿದೆ ಎಂದರು ತಿಳಿಸಿದರು.