Asianet Suvarna News Asianet Suvarna News

ಮೈಸೂರು: ಬಸ್‌ ಸೌಲಭ್ಯವಿಲ್ಲದೆ ವಿದ್ಯಾರ್ಥಿಗಳ ಪರದಾಟ

ಮೈಸೂರಿನಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು ಸೂಕ್ತ ಬಸ್ ಸೌಕರ್ಯವಿಲ್ಲದೆ ಪರದಾಡುವಂತಹ ಸ್ಥಿತಿ ಉಂಟಾಗಿದೆ. ವಿದ್ಯಾರ್ಥಿಗಳೂ ಸೇರಿ ನೂರಾರು ಮಂದಿ ಈ ಭಾಗದಲ್ಲಿ ದಿನ ನಿತ್ಯ ಓಡಾಡುತ್ತಿದ್ದು, ಬಸ್ ಇಲ್ಲದೆ ಪರದಾಡುವಂತಾಗಿದೆ.

No buses for students in Mysore
Author
Bangalore, First Published Jul 25, 2019, 3:40 PM IST

ಮೈಸೂರು(ಜು.25): ಶಾಲಾ ಕಾಲೇಜು ವಿದ್ಯಾರ್ಥಿಗಳು ಸೂಕ್ತ ಬಸ್ ಸೌಕರ್ಯವಿಲ್ಲದೆ ಪರದಾಡುವಂತಹ ಸ್ಥಿತಿ ಉಂಟಾಗಿದೆ. ವಿದ್ಯಾರ್ಥಿಗಳೂ ಸೇರಿ ನೂರಾರು ಮಂದಿ ಈ ಭಾಗದಲ್ಲಿ ದಿನ ನಿತ್ಯ ಓಡಾಡುತ್ತಿದ್ದು, ಬಸ್ ಇಲ್ಲದೆ ಪರದಾಡುವಂತಾಗಿದೆ.

ಎಚ್‌.ಡಿ. ಕೋಟೆ ತಾಲೂಕಿನ ಪ್ರಮುಖ ಕೇಂದ್ರ ಸ್ಥಳಗಳಲ್ಲಿ ಒಂದಾದ ಹ್ಯಾಂಡ್‌ ಪೋಸ್ಟ್‌ನಲ್ಲಿ ಬೆಳಗ್ಗೆ 8ರಿಂದ 9ರವರೆಗೆ ತಾಲೂಕು ಕೇಂದ್ರ ಸ್ಥಾನಕ್ಕೆ ಬಸ್‌ ಸೌಕರ್ಯವಿಲ್ಲದೆ ಪರದಾಡುವಂತಾಗಿದೆ.

ದಾವಣಗೆರೆ: ಬಸ್‌ ತಡೆದು ವಿದ್ಯಾರ್ಥಿಗಳ ಪ್ರತಿಭಟನೆ

ತಾಲೂಕಿನ ಇತರ ಹಳ್ಳಿಗಳಾದ ಅಂತರಸಂತೆ, ಸೀರನಹುಂಡಿ, ಆನಗಟ್ಟಿ, ಯಲಮತ್ತೂರು, ಲಕ್ಷ್ಮೇಪುರ, ಜಕ್ಕಹಳ್ಳಿ, ಹೈರಿಗೆ, ಯರಹಳ್ಳಿ ಮುಂತಾದ ಊರುಗಳಿಂದ ಕೋಟೆಗೆ ಕಾಲೇಜಿಗೆಂದು ಬರುವ ನೂರಾರು ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಬೆಳಗಿನ ಅವಧಿಯಲ್ಲಿ ಸೂಕ್ತ ಬಸ್‌ ವ್ಯವಸ್ಥೆ ಇಲ್ಲದೆ ಪರದಾಡುವಂತಾಗಿದೆ. ಈ ಬಗ್ಗೆ ಸಾರಿಗೆ ನಿಗಮದ ಅಧಿಕಾರಿಗಳನ್ನು ಸಂಪರ್ಕಿಸಿದಾಗ ಇದರ ಬಗ್ಗೆ ಗಮನ ಹರಿಸಿ ಬಸ್‌ ವ್ಯವಸ್ಥೆ ಮಾಡುವುದಾಗಿ ತಿಳಿಸಿದ್ದಾರೆ.

ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us:
Download App:
  • android
  • ios