1 ತಿಂಗಳು ಸವದತ್ತಿ ಯಲ್ಲಮ್ಮ ದೇವಿ ದರ್ಶನವಿಲ್ಲ
ಒಂದು ತಿಂಗಳ ಕಾಲ ಸವದತ್ತಿ ಎಲ್ಲಮ್ಮ ದೇವಾಲಯಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ
ಬೆಳಗಾವಿ(ನ.01): ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದ ಶ್ರೀ ರೇಣುಕಾದೇವಿ ಹಾಗೂ ಚಿಂಚಲಿ ಶ್ರೀ ಮಾಯಕ್ಕಾ ದೇವಿ ಸೇರಿ ಗಡಿ ಜಿಲ್ಲೆಯ ಮೂರು ದೇವಾಲಯಗಳ ಪ್ರವೇಶಕ್ಕೆ ಮತ್ತೆ ಒಂದು ತಿಂಗಳು ಭಕ್ತರಿಗೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ.
ಸತತ 8 ತಿಂಗಳಿಂದ ಸವದತ್ತಿ ಯಲ್ಲಮ್ಮ ದರ್ಶನಕ್ಕೆ ಭಕ್ತರಿಗೆ ನಿರ್ಬಂಧ ಹೇರಲಾಗಿತ್ತು.
ಇದೀಗ ಮತ್ತೆ ಒಂದು ತಿಂಗಳ ಕಾಲ ಭಕ್ತರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.
ಬೆಳಗಾವಿಯಲ್ಲಿ ಭಾರೀ ಮಳೆ; ಸವದತ್ತಿ ಕೋಟೆಯ ಒಂದು ಭಾಗ ಕುಸಿತ
ದೇಶದಾದ್ಯಂತ ಕೊರೋನಾ ಸೋಂಕಿನ ಹಾವಳಿ ಹಿನ್ನೆಲೆಯಲ್ಲಿ ಮಾ.22ರಿಂದ ಜಿಲ್ಲೆಯ ಪ್ರಮುಖ ಮೂರು ದೇವಸ್ಥಾನ ಬಂದ್ ಮಾಡಲಾಗಿದ್ದು, ಭಕ್ತರು ಇದೀಗ ಮತ್ತೊಂದು ತಿಂಗಳು ಕಾಯಬೇಕಿದೆ.