ಒಂದು ತಿಂಗಳ ಕಾಲ ಸವದತ್ತಿ ಎಲ್ಲಮ್ಮ  ದೇವಾಲಯಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ

ಬೆಳಗಾವಿ(ನ.01):  ಜಿಲ್ಲೆಯ ಸವದತ್ತಿ ಯಲ್ಲಮ್ಮನ ಗುಡ್ಡದ ಶ್ರೀ ರೇಣುಕಾದೇವಿ ಹಾಗೂ ಚಿಂಚಲಿ ಶ್ರೀ ಮಾಯಕ್ಕಾ ದೇವಿ ಸೇರಿ ಗಡಿ ಜಿಲ್ಲೆಯ ಮೂರು ದೇವಾಲಯಗಳ ಪ್ರವೇಶಕ್ಕೆ ಮತ್ತೆ ಒಂದು ತಿಂಗಳು ಭಕ್ತರಿಗೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

 ಸತತ 8 ತಿಂಗಳಿಂದ ಸವದತ್ತಿ ಯಲ್ಲಮ್ಮ ದರ್ಶನಕ್ಕೆ ಭಕ್ತರಿಗೆ ನಿರ್ಬಂಧ ಹೇರಲಾಗಿತ್ತು. 

ಇದೀಗ ಮತ್ತೆ ಒಂದು ತಿಂಗಳ ಕಾಲ ಭಕ್ತರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.

ಬೆಳಗಾವಿಯಲ್ಲಿ ಭಾರೀ ಮಳೆ; ಸವದತ್ತಿ ಕೋಟೆಯ ಒಂದು ಭಾಗ ಕುಸಿತ

ದೇಶದಾದ್ಯಂತ ಕೊರೋನಾ ಸೋಂಕಿನ ಹಾವಳಿ ಹಿನ್ನೆಲೆಯಲ್ಲಿ ಮಾ.22ರಿಂದ ಜಿಲ್ಲೆಯ ಪ್ರಮುಖ ಮೂರು ದೇವಸ್ಥಾನ ಬಂದ್‌ ಮಾಡಲಾಗಿದ್ದು, ಭಕ್ತರು ಇದೀಗ ಮತ್ತೊಂದು ತಿಂಗಳು ಕಾಯಬೇಕಿದೆ.