ಕೋವಿಡ್ ಹಿನ್ನೆಲೆಯಲ್ಲಿ ಧರ್ಮಸ್ಥಳ ಹಾಗೂ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರಾಂತ್ಯ ಪ್ರವೇಶ ನಿರ್ಬಂಧ ಸೋಮವಾರದಿಂದ ಶುಕ್ರವಾರವರೆಗೆ ಬೆಳಗ್ಗೆ 7ರಿಂದ ಸಂಜೆ 7 ಗಂಟೆವರೆಗೆ ಮಾತ್ರ ದರ್ಶನಕ್ಕೆ ಅವಕಾಶ
ಮಂಗಳೂರು (ಸೆ.08): ಕೋವಿಡ್ ಹಿನ್ನೆಲೆಯಲ್ಲಿ ಧರ್ಮಸ್ಥಳ ಹಾಗೂ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೋಮವಾರದಿಂದ ಶುಕ್ರವಾರವರೆಗೆ ಬೆಳಗ್ಗೆ 7ರಿಂದ ಸಂಜೆ 7 ಗಂಟೆವರೆಗೆ ಮಾತ್ರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದ್ದು, ವಾರಾಂತ್ಯ(ಶನಿವಾರ, ಭಾನುವಾರ)ದ ದಿನ ಭಕ್ತರ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರದಲ್ಲಿ ಇಳಿಕೆಯಾಗಿದ್ದರೂ, ಸಂಭಾವ್ಯ 3ನೇ ಅಲೆಯನ್ನು ಸಮರ್ಪಕವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ಈ ಆದೇಶ ಹೊರಡಿಸಿದ್ದಾರೆ.
ಧರ್ಮಸ್ಥಳ, ಕಟೀಲು, ಕುಕ್ಕೆಯಲ್ಲಿ ದೇಗುಲ ಬಂದ್ : ಯಾವಾಗ..?
ತೀರ್ಥ ಪ್ರಸಾದ, ಸೇವೆಗಳು, ಅನ್ನಸಂತರ್ಪಣೆಗೆ ಅವಕಾಶವಿಲ್ಲ. ವಾರಾಂತ್ಯದಲ್ಲಿ ವಸತಿ ಗೃಹಗಳಲ್ಲಿ ತಂಗುವುದು ಅಥವಾ ದೇವರ ದರ್ಶನಕ್ಕೆ ಅವಕಾಶವಿಲ್ಲ. ಅರ್ಚಕರಿಂದ ಸಾಂಪ್ರದಾಯಿಕ ಪೂಜೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಜಾತ್ರೆಗಳು, ದೇವಾಲಯದ ಉತ್ಸವಗಳು ಹಾಗೂ ಮೆರವಣಿಗೆಗಳನ್ನು ಸಹ ನಿಷೇಧಿಸಲಾಗಿದೆ.
