* ರಂಜಾನ್ ಹಬ್ಬ ಹಿನ್ನಲೆಯಲ್ಲಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಟ್ವೀಟ್* ಎಲ್ಲರೂ ಲಾಕ್ ಡೌನ್ ರೂಲ್ಸ್  ಎಲ್ಲರೂ ಫಾಲೋ ಮಾಡಲೇಬೇಕು* ಹಬ್ಬವೆಂದು ಮನೆಯಿಂದ ಹೊರ ಬರುವಂತಿಲ್ಲ, ಗುಂಪು ಸೇರುವಂತಿಲ್ಲ * ಈಗಾಗಲೇ ಮುಸ್ಲಿಂ ಸಮುದಾಯಗಳ ಜೊತೆ ಮಾತುಕತೆ ನಡೆಸಿರುವ ಕಮಿಷನರ್ ಕಮಲ್ ಪಂತ್

ಬೆಂಗಳೂರು (ಮೇ 13) ರಂಜಾನ್ ಆಚರಣೆಗೂ ಮುನ್ನ ಪೊಲೀಸ್ ಆಯುಕ್ತ ಕಮಲ್ ಪಂತ್ ಟ್ವೀಟ್ ಮಾಡಿದ್ದು ಅನೇಕ ವಿಚಾರಗಳನ್ನು ಸ್ಪಷ್ಟಮಾಡಿದ್ದಾರೆ.

ರಂಜಾನ್​ ತಿಂಗಳ ಉಪವಾಸದ ಕೊನೆಯ ದಿನದ ಹಬ್ಬ ಈದ್​ ಉಲ್​ ಫಿತರ್​ ಆಚರಣೆಗೆ ಈಗಾಗಲೇ ಸಿದ್ದತೆ ನಡೆಸಿದೆ. ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗುವುದು ಸಂಪ್ರದಾಯವಾಗಿತ್ತು.

ಆದರೆ ಈ ಬಾರಿ ಕೋವಿಡ್​ ಆತಂಕ ಎದುರಾಗಿದ್ದು, ರಾಜ್ಯದಲ್ಲಿ ಲಾಕ್​ಡೌನ್​ ಜಾರಿಯಲ್ಲಿದೆ. ಈ ಹಿನ್ನಲೆ ಹಬ್ಬವನ್ನು ಸರಳವಾಗಿ ಮನೆಯಲ್ಲಿಯೇ ಆಚರಿಸುವಂತೆ ಕೋರಲಾಗಿದೆ. 

ಈ ಲಸಿಕೆ ಎಲ್ಲದಕ್ಕಿಂತ ಪರಿಣಾಮಕಾರಿ ಎಂದ ಸುಧಾಕರ್

ಸಾಮೂಹಿಕ ಪ್ರಾರ್ಥನೆಗೆ ನಿರ್ಬಂಧವಿದ್ದು, ಮನೆಯಲ್ಲಿಯೇ ನಮಾಜ್ ಮಾಡಬಹುದು. ನಿಯಮ ಜಾರಿಯಲ್ಲಿರುವುದರಿಂದ ಯಾರು ಮನೆಯಿಂದ ಹೊರ ಬರುವಂತಿಲ್ಲ. ಗುಂಪು ಸೇರುವಂತಿಲ್ಲ ಎಂದು ಪಂತ್ ತಿಳಿಸಿದ್ದಾರೆ.

ಮುಸ್ಲಿಂ ಸಮುದಾಯಗಳ ಜೊತೆ ಮಾತುಕತೆ ನಡೆಸಲಾಗಿದೆ. ಬೆಂಗಳೂರಿನಲ್ಲಿ ಸೆಕ್ಷನ್​ 144 ಜಾರಿಯಲ್ಲಿದ್ದು, ಗುಂಪು ಸೇರುವಂತಿಲ್ಲ. ಅಗತ್ಯ ಮುನ್ನೆಚ್ಚರಿಕೆವಹಿಸಬೇಕು. ಕೊರೋನಾ ನಿಯಮಗಳ ಪಾಲನೆ ಅಗತ್ಯ ಎಂದು ತಿಳಿಸಿದ್ದಾರೆ. 

Scroll to load tweet…