ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹಾವೇರಿ ವಿಭಾಗವು ಹಾವೇರಿ-ಬೆಂಗಳೂರು, ಹುಬ್ಬಳ್ಳಿ-ಹಾವೇರಿ-ಬೆಂಗಳೂರು ಹಾಗೂ ದಾವಣಗೆರೆ-ಹಾವೇರಿ-ಪಣಜಿ ಸೇರಿದಂತೆ ವಿವಿಧ ಮಾರ್ಗಗಳಲ್ಲಿ ಹೊಸ ಬಸ್ಸುಗಳ ಸಂಚಾರವನ್ನು ಆರಂಭಿಸಿದೆ. ಉಪ ಸಭಾಪತಿ ಹಾಗೂ ಶಾಸಕ ರುದ್ರಪ್ಪ ಲಮಾಣಿ ಅವರು ಈ ನೂತನ ಸಾರಿಗೆ ಸೇವೆಗೆ ಚಾಲನೆ ನೀಡಿದರು.
ಹಾವೇರಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾವೇರಿ ವಿಭಾಗದ ವತಿಯಿಂದ ಹಾವೇರಿ-ಬೆಂಗಳೂರು, ಹುಬ್ಬಳ್ಳಿ-ಹಾವೇರಿ-ಬೆಂಗಳೂರು ಹಾಗೂ ದಾವಣಗೆರೆ-ಹಾವೇರಿ-ಪಣಜಿ ಮಾರ್ಗದಲ್ಲಿ ಕಾರ್ಯಾಚರಣೆಯಲ್ಲಿರುವ ಸಾರಿಗೆಗಳಿಗೆ ಹೊಸ ಬಸ್ಸುಗಳ ಸಂಚಾರಕ್ಕೆ ಉಪ ಸಭಾಪತಿ, ಶಾಸಕ ರುದ್ರಪ್ಪ ಲಮಾಣಿ ಸೋಮವಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಎಂ.ಎಂ. ಹಿರೇಮಠ, ತಾಲೂಕಾಧ್ಯಕ್ಷ ಎಂ.ಎಂ. ಮೈದೂರು, ಕೆಸಿಸಿ ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗಣ್ಣಿ, ಹಾವೆಮುಲ್ ನಿರ್ದೇಶಕ ಬಸವೇಶಗೌಡ ಪಾಟೀಲ, ಹಾವೇರಿ ವಿಭಾಗದ ವಿಭಾಗೀಯ ಸಾರಿಗೆ ಅಧಿಕಾರಿ ಅಶೋಕ ಪಾಟೀಲ್, ಹಾವೇರಿ ಘಟಕ ವ್ಯವಸ್ಥಾಪಕ ಪ್ರಶಾಂತ ಸಂಗ್ರೇಶಿ, ಸಂಚಾರ ನಿರೀಕ್ಷಕ ಟಿ.ಕೆ.ನದಾಫ್, ಕುಮಾರ ತೋಟಗೇರ, ಸಿಬ್ಬಂದಿ ಮೇಲ್ವಿಚಾರಕ ಹನುಮಂತ ಸಂಕ್ಲೀಪುರ, ಬಸ್ ನಿಲ್ದಾಣಾಧಿಕಾರಿ ಕೆ.ಎಂ. ಲಮಾಣಿ, ಬಿ.ಆರ್.ತಡಸದ ಹಾಗೂ ವಿಭಾಗದ ಚಾಲನಾ ಸಿಬ್ಬಂದಿಗಳು ಇದ್ದರು.
ಇದನ್ನೂ ಓದಿ: ಕೇವಲ 2 ಗಂಟೆಯಲ್ಲಿ ಬೆಂಗಳೂರಿನಿಂದ ಹುಬ್ಬಳ್ಳಿಗೆ ಪ್ರಯಾಣ; ಗಂಟೆಗೆ 220 ಕಿ.ಮೀ ವೇಗದ ಹೊಸ ರೈಲು!
ಇದನ್ನೂ ಓದಿ: ಶೇಖಿ ಅಣ್ಣನ ಅಂಗಡಿಗೆ ಬೀಗ; ಅಕ್ಷರಗಳ ಯುಗಕ್ಕೆ ತೆರೆ ಓದುಗರ ಮನದಲ್ಲಿ ಉಳಿದ ಅಯ್ನೋರ ನೆನಪು


