ಸಾವಿನಲ್ಲೂ ಒಂದಾದ ವೃದ್ಧ ದಂಪತಿ| ಕೊಪ್ಪಳ ಜಿಲ್ಲೆ ಕನಕಗಿರಿಯಲ್ಲಿ ನಡೆದ ಘಟನೆ| ಮಹಾಬಳೇಶ್ವರ ಸ್ವಾಮಿ ಹಾಗೂ ಪತ್ನಿ ಪ್ರಭಾವತಿ ಎಂಬುವರೇ ಸಾವಿನಲ್ಲೂ ಒಂದಾದ ದಂಪತಿಯಾಗಿದ್ದಾರೆ| ಅಜ್ಜ, ಅಜ್ಜಿಯ ಸಾವಿನಿಂದ ಮುಗಿಲುಮುಟ್ಟಿದ ಕುಟುಂಬಸ್ಥರ ಆಕ್ರಂದನ| 

ಕೊಪ್ಪಳ(ಮೇ.21): ಸಾವಿನಲ್ಲೂ ವೃದ್ಧ ದಂಪತಿ ಒಂದಾದ ಘಟನೆ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ಇಂದು(ಗುರುವಾರ) ನಡೆದಿದೆ. ಮಹಾಬಳೇಶ್ವರ ಸ್ವಾಮಿ ಹಾಗೂ ಪತ್ನಿ ಪ್ರಭಾವತಿ ಎಂಬುವರೇ ಸಾವಿನಲ್ಲೂ ಒಂದಾದ ದಂಪತಿಯಾಗಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

78 ವರ್ಷದ ಪತ್ನಿ ಪ್ರಭಾವತಿ ಎಂಬುವರು ನಿನ್ನೆ ತಡರಾತ್ರಿ(ಬುಧವಾರ) ಹೃದಯಾಘಾತದಿಂದ ಮೃತಪಟ್ಟಿದ್ದರು. ಈ ಸುದ್ದಿ ಕೇಳಿದ ಪತಿ ಮಹಾಬಳೇಶ್ವರ ಸ್ವಾಮಿ(86) ಅವರು ಕೂಡ ಇಂದು ನಿಧನಹೊಂದಿದ್ದಾರೆ.

ಲಾಕ್‌ಡೌನ್‌: ಹಸಿದರ ಹೊಟ್ಟೆ ತುಂಬಿಸಿದ ಮುನಿರಾಬಾದ್‌ ಪೊಲೀಸ್‌ ಠಾಣೆ, ನಿತ್ಯ ದಾಸೋಹ

ಇವರಿಬ್ಬರ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು. ಅಜ್ಜ, ಅಜ್ಜಿ ಸಾವಿನಲ್ಲೂ ಒಂದಾಗಿ ಸಾವನ್ನಪ್ಪಿದ್ದಾರೆ ಎಂದು ಕೆಲವರು ಮಾತನಾಡಿಕೊಳ್ಳುತ್ತಿದ್ದರು.