Asianet Suvarna News Asianet Suvarna News

ಅನುತ್ತೀರ್ಣರಿಗೆ ಪರೀಕ್ಷೆ ಬರೆಯುವ ಅವಕಾಶ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ವಿವಿಧ ಕೋರ್ಸುಗಳಿಗೆ ಪ್ರವೇಶ ಪಡೆದು ಪರೀಕ್ಷೆ ತೆಗೆದುಕೊಂಡಿಲ್ಲದ ಅಥವಾ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯುವ ಅವಕಾಶವನ್ನು ಕಲ್ಪಿಸಲಾಗಿದೆ

 

opportunity to write exam to those who failed
Author
Bangalore, First Published Dec 18, 2019, 9:58 AM IST

ಚಾಮರಾಜನಗರ(ಡಿ.18): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ವಿವಿಧ ಕೋರ್ಸುಗಳಿಗೆ ಪ್ರವೇಶ ಪಡೆದು ಪರೀಕ್ಷೆ ತೆಗೆದುಕೊಂಡಿಲ್ಲದ ಅಥವಾ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯುವ ಅವಕಾಶವನ್ನು ಕಲ್ಪಿಸಲಾಗಿದೆ.

ಅದರಂತೆ 2013-14 ಮತ್ತು 2013-14ನೇ ಶೈಕ್ಷಣಿಕ ಸಾಲಿನಲ್ಲಿ ಪ್ರವೇಶ ಪಡೆದ ಬಿ.ಎ, ಬಿ.ಕಾಂ, ಬಿಎಲ್‌ಐಎಸ್‌ಸಿ, ಬಿ.ಎಡ್‌(ವಿಶೇಷ), ಎಂಎ, ಎಂ.ಕಾಂ, ಎಂಬಿಎ, ಲೈಬ್ರರಿ ಸೈನ್ಸ್‌, ಎಲ್ಲ ಎಂಎಸ್‌ಸಿ, ಎಲ್ಲ ಡಿಪ್ಲೋಮಾ ಅಥವಾ ಸರ್ಟಿಫಿಕೇಟ್‌ ಕೋರ್ಸ್‌ಗಳು ಹಾಗೂ 2011-12, 2012-13 ಮತ್ತು 2018-19ನೇ ಸಾಲಿನಲ್ಲಿ ಪ್ರವೇಶಾತಿ ಪಡೆದ ಸ್ನಾತಕ ಪದವಿಗಳಾದ ಬಿ.ಎ, ಬಿ.ಕಾಂ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಳ್ಳದೇ ಇದ್ದಲ್ಲಿ ಅಥವಾ ಅನುತ್ತೀರ್ಣರಾಗಿದ್ದಲ್ಲಿ ಮತ್ತೊಮ್ಮೆ ಪರೀಕ್ಷೆ ಬರೆಯಬಹುದಾಗಿದೆ.

ಕೆಪಿಎಸ್‌ಸಿ ನೇಮಕಾತಿ: ಗ್ರೂಪ್ ಸಿ ಹುದ್ದೆಗಳ ಭರ್ತಿ

ಆಸಕ್ತ ವಿದ್ಯಾರ್ಥಿಗಳು ದಂಡ ಶುಲ್ಕವಿಲ್ಲದೇ ಡಿ. 24ರೊಳಗೆ ಮತ್ತು ದಂಡ ಸಹಿತ 2020ರ ಜ. 5ರೊಳಗೆ ಪರೀಕ್ಷಾ ಶುಲ್ಕವನ್ನು ಪಾವತಿಸಬೇಕು. ಜಿಲ್ಲೆಯ ವಿದ್ಯಾರ್ಥಿಗಳು ಈ ಅವಕಾಶದ ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ ವಿಶ್ವವಿದ್ಯಾಲಯದ ವೆಬ್‌ಸೈಟ್‌ https://www.ksoumysuru.ac.in/ ವೀಕ್ಷಿಸಬಹುದು ಮತ್ತು ನಗರದ ರಾಮಸಮುದ್ರ ಕೆಎಚ್‌ಬಿ ಬಡಾವಣೆಯ ಇಮಾನ್ಯುವೆಲ್‌ ಕ್ರಿಶ್ಚಿಯನ್‌ ಪಬ್ಲಿಕ್‌ ಶಾಲೆಯ ಎದುರು ಇರುವ ವಿವಿ ಪ್ರಾದೇಶಿಕ ಕೇಂದ್ರ ಕಚೇರಿ ಅಥವಾ ದೂ.ಸಂ: 08226-222191 ಅನ್ನು ಸಂಪರ್ಕಿಸುವಂತೆ ಪ್ರಾದೇಶಿಕ ಕೇಂದ್ರದ ನಿರ್ದೇಶಕ ಎಸ್‌.ಮಹದೇವ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿರುದ್ಯೋಗಿಗಳನ್ನು ಉದ್ಯೋಗಸ್ಥರಾಗಿಸಲು ಕರ್ನಾಟಕ ಸರ್ಕಾರದಿಂದ ಮಹತ್ವದ ಯೋಜನೆ

Follow Us:
Download App:
  • android
  • ios