Asianet Suvarna News Asianet Suvarna News

Bengaluru: ಸೆಪ್ಟೆಂಬರೊಳಗೆ ಎಲ್ಲಾ ಟ್ರಾನ್ಸ್‌ಫಾರ್ಮರ್‌ ಫುಟ್‌ಪಾತ್‌ನಿಂದ ಸ್ಥಳಾಂತರ, ಹೈಕೋರ್ಟ್‌ಗೆ ಬೆಸ್ಕಾಂ ಮಾಹಿತಿ

ಬೆಂಗಳೂರು ನಗರದಲ್ಲಿ ಸೆಪ್ಟೆಂಬರ್ 2022 ರಿಂದ ಇಲ್ಲಿಯವರೆಗೆ 1,554 ಟ್ರಾನ್ಸ್‌ಫಾರ್ಮರ್‌ಗಳನ್ನು ಫುಟ್‌ಪಾತ್‌ಗಳಿಂದ ಸ್ಥಳಾಂತರಿಸಲಾಗಿದೆ. ಉಳಿದ 1,033 ಟ್ರಾನ್ಸ್‌ಫಾರ್ಮರ್‌ಗಳನ್ನು  ಈ ವರ್ಷದ ಸೆಪ್ಟೆಂಬರ್‌ನೊಳಗೆ ಪೂರ್ಣಗೊಳಿಸುವುದಾಗಿ ಬೆಸ್ಕಾಂ ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದೆ.

Over 1,500 transformers moved off footpaths in Bengaluru Bescom tells high court gow
Author
First Published Jan 10, 2023, 5:46 PM IST

ಬೆಂಗಳೂರು (ಜ.10): ಬೆಂಗಳೂರು ನಗರದಲ್ಲಿ ಸೆಪ್ಟೆಂಬರ್ 2022 ರಿಂದ ಇಲ್ಲಿಯವರೆಗೆ 1,554 ಟ್ರಾನ್ಸ್‌ಫಾರ್ಮರ್‌ಗಳನ್ನು ಫುಟ್‌ಪಾತ್‌ಗಳಿಂದ ಸ್ಥಳಾಂತರಿಸಲಾಗಿದೆ. ಉಳಿದ 1,033 ಟ್ರಾನ್ಸ್‌ಫಾರ್ಮರ್‌ಗಳನ್ನು ಫುಟ್‌ಪಾತ್‌ನಿಂದ ಸ್ಥಳಾಂತರಿಸುವುದನ್ನು ಈ ವರ್ಷದ ಸೆಪ್ಟೆಂಬರ್‌ನೊಳಗೆ ಪೂರ್ಣಗೊಳಿಸುವುದಾಗಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಸೋಮವಾರ ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದೆ.

ಗುರುತಿಸಲಾದ 2,587 ಟ್ರಾನ್ಸ್‌ಫಾರ್ಮರ್‌ಗಳಲ್ಲಿ, ಸೆಪ್ಟೆಂಬರ್‌ನಿಂದ ಫುಟ್‌ಪಾತ್‌ಗಳಿಂದ 1,554 ಹೊಸ ಸ್ಪನ್ ಪೋಲ್ ರಚನೆಗಳನ್ನು ಈಗಾಗಲೇ ಸ್ಥಳಾಂತರಿಸಲಾಗಿದೆ ಅಥವಾ ಬದಲಾಯಿಸಲಾಗಿದೆ ಎಂದು ಬೆಸ್ಕಾಂ ತಿಳಿಸಿದೆ.  ವಿಂಗ್ ಕಮಾಂಡರ್ ಜಿ ಬಿ ಅತ್ರಿ (ನಿವೃತ್ತ) ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್ ಕಿಣಗಿ ಅವರ ವಿಭಾಗೀಯ ಪೀಠದ ಮುಂದೆ ಬೆಸ್ಕಾಂ ಈ ಸಲ್ಲಿಕೆ ಮಾಡಿದೆ.

ಪಾದಚಾರಿಗಳ ಸುರಕ್ಷತೆಗಾಗಿ ಕಾಲಮಿತಿಯಲ್ಲಿ ಟ್ರಾನ್ಸ್‌ಫಾರ್ಮರ್‌ಗಳು ಮತ್ತು ಇತರ ವಿದ್ಯುತ್ ಸ್ಥಾಪನೆಗಳನ್ನು ಫುಟ್‌ಪಾತ್‌ಗಳಿಂದ ಸ್ಥಳಾಂತರಿಸಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನಗಳನ್ನು ಕೋರಿ 2020 ರಲ್ಲಿ ಅರ್ಜಿ ಸಲ್ಲಿಸಲಾಯಿತು. ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ನೇತೃತ್ವದ ವಿಭಾಗೀಯ ಪೀಠವು ಮಾಸಿಕ ಸ್ಥಿತಿಗತಿ ವರದಿ ಸಲ್ಲಿಸುವಂತೆ ಬೆಸ್ಕಾಂಗೆ ಸೂಚಿಸಿ, ವಿಚಾರಣೆಯನ್ನು ಮುಂದೂಡಿತು.

Electricity Bill: ಡಿಜಿಟಲ್‌ ಮೀಟರ್‌ ಅಳವಡಿಸಿಕೊಳ್ಳುವ ಗ್ರಾಹಕರೇ ಎಚ್ಚರ: ವಿದ್ಯುತ್ ಬಿಲ್ ದುಪ್ಪಟ್ಟಾದ ಅಳಲು ಕೇಳಿ

ಟ್ರಾನ್ಸ್‌ಫಾರ್ಮರ್‌ ಇರುವ ಕಡೆ ಸ್ವಚ್ಛತೆ ಕಾಪಾಡಿ: ಕೋರ್ಟ್
ಇನ್ನು  ಪಾದಚಾರಿ ಮಾರ್ಗ ಸೇರಿದಂತೆ ಸಾರ್ವಜನಿಕರ ಸುರಕ್ಷತೆ ಮತ್ತು ಆರೋಗ್ಯದ ದೃಷ್ಟಿಯಿಂದ ವಿದ್ಯುತ್‌ ಪರಿವರ್ತಕಗಳು (ಟ್ರಾನ್ಸ್‌ ಫಾರ್ಮರ್‌) ಇರುವ ಸ್ಥಳದ ಸುತ್ತಲಿನ ಜಾಗದ ನೈರ್ಮಲ್ಯ ಕಾಪಾಡುವಂತೆ ಬೆಸ್ಕಾಂ ಮತ್ತು ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶಿಸಿದೆ.

ವರ್ಷದ ಕೊನೆಯಲ್ಲಿ ಕರ್ನಾಟಕದ ಜನತೆಗೆ ಗುಡ್ ನ್ಯೂಸ್..!

ಬೆಂಗಳೂರಿನಲ್ಲಿ ಪಾದಚಾರಿ ಮಾರ್ಗಗಳು ಹಾಗೂ ರಾಜಕಾಲುವೆಗಳ ಮೇಲೆ ಅಳವಡಿಸಲಾಗಿರುವ ಟ್ರಾನ್ಸ್‌ಫಾರ್ಮರ್‌ಗಳನ್ನು ತೆರವುಗೊಳಿಸಲು ನಿರ್ದೇಶಿಸುವಂತೆ ಕೋರಿ ನಿವೃತ್ತ ವಿಂಗ್‌ ಕಮಾಂಡರ್‌ ಜಿ.ಬಿ. ಅತ್ರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಅವರ ನೇತೃತ್ವದ ವಿಭಾಗೀಯ ಪೀಠ ಈ ಸೂಚನೆ ನೀಡಿ ವಿಚಾರಣೆ ಮುಂದೂಡಿದೆ. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಜಿ.ಆರ್‌.ಮೋಹನ್‌ ವಾದಿಸಿದರು.

Follow Us:
Download App:
  • android
  • ios