ಕೆಲ ವರ್ಷಗಳಿಂದ ಮನೆಯಲ್ಲಿ ಸಾಕಲಾಗಿದ್ದ ಹೆಣ್ಣು ಶ್ವಾನವನ್ನು ಮಾಲೀಕರೇ ಬಲವಂತವಾಗಿ ಕಸ ವಿಲೇವಾರಿ ಮಾಡುವ ಪಾಲಿಕೆಯ ಲಾರಿಗೆ ಹಾಕಿದ್ದಾರೆ. ಈ ಅಮಾನುಷ ಕೃತ್ಯ ಮಾಡಿದ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಮಂಗಳೂರು(ಸೆ.11): ಜೀವಂತ ಸಾಕು ನಾಯಿಯನ್ನೇ ಮನೆ ಮಾಲೀಕ ಕಸ ವಿಲೇವಾರಿ ಮಾಡುವ ವಾಹನಕ್ಕೆ ತಳ್ಳಿದ ಅಮಾನವೀಯ ಘಟನೆ ಮಂಗಳೂರಿನಲ್ಲಿ ನಡೆದಿದ್ದು, "ಪ್ರಾಣಿ ಪ್ರಿಯರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಗರದ ಡೊಂಗರಕೇರಿಯಲ್ಲಿ ಶನಿವಾರ ಈ ಕೃತ್ಯ ಬೆಳಕಿಗೆ ಬಂದಿದೆ. ಕೆಲ ವರ್ಷಗಳಿಂದ ಮನೆಯಲ್ಲಿ ಸಾಕಲಾಗಿದ್ದ ಹೆಣ್ಣು ಶ್ವಾನವನ್ನು ಮಾಲೀಕರೇ ಬಲವಂತವಾಗಿ ಕಸ ವಿಲೇವಾರಿ ಮಾಡುವ ಪಾಲಿಕೆಯ ಲಾರಿಗೆ ಹಾಕಿದ್ದಾರೆ. ಈ ಅಮಾನುಷ ಕೃತ್ಯ ಮಾಡಿದ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಬೇರೊಬ್ಬರನ್ನು ಮದುವೆಯಾದ ಪ್ರೇಯಸಿಯನ್ನು ಗರ್ಭಿಣಿ ಮಾಡಿ ಪರಾರಿಯಾದ ರಹಮತ್ತುಲ್ಲಾ!

ನಾಯಿಯನ್ನು ವಾಮಂಜೂರು ಡಂಪಿಂಗ್ ಯಾರ್ಡ್ ಬಳಿ ಬಿಡಲಾಗಿದ್ದು, ಪ್ರಾಣಿ ದಯಾ ಸಂಘದ ಸದಸ್ಯರು ಹುಡುಕಾಟ ನಡೆಸಿದ್ದಾರೆ. ಈ ಶ್ವಾನ ಕಂಡರೆ ಮಾಹಿತಿ ನೀಡುವಂತೆ ಕೋರಿದ್ದಾರೆ.