ವಿಧಾನಸೌಧಕ್ಕೆ ಪಂಚಮಸಾಲಿ ಹೋರಾಟ ಶಿಫ್ಟ್/  ವಿಧಾನಸೌಧ ಬಳಿ ಧರಣಿ ಸತ್ಯಾಗ್ರಹ ನಡೆಸಲು ನಿರ್ಧಾರ/ ಸರ್ಕಾರದ ಮನವಿಗೂ ಜಗ್ಗದ ಪಂಚಮಸಾಲಿ ಸಮುದಾಯ/ ಮಾರ್ಚ್ 4 ನೇ ತಾರೀಕಿನ ವರೆಗೂ ವಿಧಾನಸೌಧ ದಲ್ಲಿ ಧರಣಿ ಸತ್ಯಾಗ್ರಹ ನಡೆಸಲು ನಿರ್ಧಾರ/  ಇಬ್ಬರು ಸಚಿವರು ಸಚಿವರು ಬಂದು ಮನವಿ ಮಾಡಿದ್ದಿವಿ

ಬೆಂಗಳೂರು( ಫೆ. 21) 2 ಎ ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿ ಹೋರಾಟ ಅರಮನೆ ಮೈದಾನದಲ್ಲಿ ನಡೆಯುತ್ತಿತ್ತು. ಈಗ ಹೋರಾಟ ಅಲ್ಲಿಂದ ವಿಧಾನಸೌಧಕ್ಕೆ ಶಿಫ್ಟ್ ಆಗಿದೆ. ವಿಧಾನಸೌಧ ಬಳಿ ಧರಣಿ ಸತ್ಯಾಗ್ರಹ ನಡೆಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸರ್ಕಾರದ ಮನವಿ ಮಾಡಿಕೊಂಡರೂ ಪಂಚಮಸಾಲಿ ಸಮುದಾಯ ಹಿಂದೆ ಸರಿದಿಲ್ಲ. ಮಾರ್ಚ್ 4 ನೇ ತಾರೀಕಿನ ವರೆಗೂ ವಿಧಾನಸೌಧ ದಲ್ಲಿ ಧರಣಿ ಸತ್ಯಾಗ್ರಹ ನಡೆಸಲು ನಿರ್ಧಾರ ತೆಗದೆಕುಕೊಳ್ಳಲಾಗಿದೆ.

ಇಬ್ಬರು ಸಚಿವರು ಸಚಿವರು ಬಂದು ಮನವಿ ಮಾಡಿಕೊಂಡಿದ್ದರೂ ಕೇಳಿಲ್ಲ ಆದರೂ ಇಲ್ಲಿ ಒಪ್ಪಲು ಸಿದ್ಧವಿಲ್ಲ ಸರ್ಕಾರ ಕೂಡ ಸಕಾರಾತ್ಮಕವಾಗೇ ಇದೆ ಎಂದು ಸಚಿವ ಮುರುಗೇಶ್ ನಿರಾಣಿ ಪ್ರತಿಕ್ರಿಯೆ ನೀಡಿದ್ದಾರೆ.

ಸಚಿವರ ಮಹತ್ವದ ಸಭೆಯಲ್ಲಿ ಆದ ತೀರ್ಮಾನ ಏನು? 

ಸಮಾವೇಶ ಸ್ಥಳಕ್ಕೆ ಕಮಿಷನರ್ ಕಮಲ್ ಪಂತ್ ಸಹ ಭೇಟಿ ನೀಡಿದ್ದಾರೆ. 2 ಎ ಆದೇಶ ಪ್ರಮಾಣ ಪತ್ರ ಸಿಗೋವರೆಗೂ ಹೋರಾಟ ಮುಂದುವರಿಯುತ್ತದೆ. ನಾವೀಗ ಧರಣಿ ಸತ್ಯಾಗ್ರಹ ನಡೆಸಲು ಮುಂದಾಗಿದ್ದೇವೆ. ಸರ್ಕಾರ ಕೇವಲ ಕಾರಣಗಳನ್ನು ನೀಡ್ತಿದೆ ಅಷ್ಟೇ. ಸರ್ಕಾರದ ಪ್ರತಿನಿಧಿಯಾಗಿ ಸಚಿವರು ಬಂದಿದ್ದರು ಆದರೆ ನಮ್ಮ ಹೋರಾಟ ಇರುವುದು ನಮ್ಮ ಸಮುದಾಯಕ್ಕೆ ಎಂದು ಪ್ರತಿಭಟನಾಕಾರರು ಹೇಳಿಕೆ ನೀಡಿದ್ದಾರೆ. 

ಪ್ರತಿಭಟನಾಕಾರರು ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಸಂಭವ ಇರುವುದರಿಂದ ಬಿಗಿ ಭದ್ರತೆ ನೀಡಲಾಗಿದೆ. ವಿಧಾನಸೌಧ ಸುತ್ತಮುತ್ತಲ ಪ್ರದೇಶದಲ್ಲಿ ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿದೆ.