ಕನ್ನಡ ಸಾಹಿತ್ಯ ಪರಿಷತ್ತು ರಾಜ್ಯ ಘಟಕ ಹಾಗೂ ಕೊಡಗು ಜಿಲ್ಲಾ ಘಟಕ ವತಿಯಿಂದ ಮಡಿಕೇರಿಯಲ್ಲಿ ನಡೆದ ‘ಪಂಜೆ ಮಂಗೇಶರಾಯರ 150 ನೇ ವರ್ಷಾಚರಣೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ವರದಿ: ರವಿ.ಎಸ್ ಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್
ಕೊಡಗು (ಫೆ.20): ಮಕ್ಕಳನ್ನು ಕಲ್ಪನಾ ಲೋಕದಲ್ಲಿ ಬೆಳೆಸಿದಲ್ಲಿ ಸಾಹಿತ್ಯದ ಅಭಿರುಚಿ ಬೆಳೆಯಲು ಸಾಧ್ಯ ಎಂದು ಸಾಹಿತಿ ಅರವಿಂದ ಚೊಕ್ಕಾಡಿ ಅಭಿಪ್ರಾಯಪಟ್ಟರು. ಕನ್ನಡ ಸಾಹಿತ್ಯ ಪರಿಷತ್ತು ರಾಜ್ಯ ಘಟಕ ಹಾಗೂ ಕೊಡಗು ಜಿಲ್ಲಾ ಘಟಕ ವತಿಯಿಂದ ಮಡಿಕೇರಿಯಲ್ಲಿ ನಡೆದ ‘ಪಂಜೆ ಮಂಗೇಶರಾಯರ 150 ನೇ ವರ್ಷಾಚರಣೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ನಾಗರ ಹಾವೇ ಹಾವೊಳು ಹೂವೆ ಬಾಗಿಲ ಬಿಲದಲಿ ನಿನ್ನಯ ಠಾವೆ ಎಂಬ ಕವಿತೆಯನ್ನು ಬರೆಯುವ ಮೂಲಕ ಪಂಜೆ ಮಂಗೇಶರಾಯರು ಬ್ರಿಟಿಷರ ವಿರುದ್ಧ ಅಸಮಾಧಾನ ಹೊರಹಾಕಿದ್ದರು ಎಂದರು.
ಅವರು ಕನ್ನಡ ಸಾಹಿತ್ಯದಲ್ಲಿ ಸಾಮಾಜಿಕ ಕಳಕಳಿ ಒಳಗೊಂಡ ಕೃತಿಗಳನ್ನು ರಚಿಸಿದ್ದಾರೆ. ಅದರಲ್ಲೂ ಕೊಡಗಿನ ಶ್ರೀಮಂತಿಕೆ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಪಂಜೆ ಮಂಗೇಶರಾಯರನ್ನು ಸದಾ ಸ್ಮರಿಸಿಕೊಳ್ಳುವಂತಾಗಬೇಕು. ಶಿಕ್ಷಕರಾಗಿ, ಪ್ರಾಧ್ಯಾಪಕರಾಗಿ ದುಡಿದಿದ್ದಾರೆ ಎಂದರು. ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಘಟಕದ ಅಧ್ಯಕ್ಷರಾದ ಎಚ್.ಎಲ್. ಮಲ್ಲೇಶ್ ಗೌಡ ಅವರು ಮಾತನಾಡಿ ಮಕ್ಕಳಿಗೆ ಮನೆಯಲ್ಲಿಯೇ ಸಾಹಿತ್ಯದ ಅಭಿರುಚಿ ಬೆಳೆಸುವಂತಾಗಬೇಕು. ಪಠ್ಯಪುಸ್ತಕದ ಜೊತೆಗೆ ಉತ್ತಮ ಸಾಹಿತ್ಯ ಕೃತಿಗಳ ಓದುವುದನ್ನು ಬೆಳೆಸಿಕೊಂಡಲ್ಲಿ ಹೆಚ್ಚಿನ ಜ್ಞಾನ ಸಂಪಾದಿಸಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು. ‘ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಪಂಜೆ ಮಂಗೇಶರಾಯರ ಕೊಡುಗೆ ಅಪಾರವಾಗಿದೆ. 20ನೇ ಶತಮಾನದ ಹಾದಿಯಲ್ಲಿ ಕೊಡಗಿನ ಶ್ರೀಮಂತಿಕೆಯನ್ನು ವರ್ಣಿಸಿದ್ದಾರೆ.
ಮದುವೆ ಸೇರಿ ಇತರೆ ಸಮಾರಂಭಗಳಿಗೆ ಮದ್ಯ ಖರೀದಿಸಲು ಸಾಂದರ್ಭಿಕ ಸನ್ನದು ಕಡ್ಡಾಯ: ಕೊಡಗಿನಲ್ಲಿ ತೀವ್ರ ವಿರೋಧ
ಕೊಡಗಿನ ಸಿರಿಯನ್ನು ಕನ್ನಡ ಸಾಹಿತ್ಯದ ಮೂಲಕ ಕಟ್ಟಿಕೊಟ್ಟಿದ್ದಾರೆ ಎಂದು ಅಂದರು.’ ಕನ್ನಡ ಸಾಹಿತ್ಯವು ಜಗತ್ತಿನಲ್ಲಿಯೇ ಹೆಚ್ಚಿನ ಕೃತಿಗಳು ಪ್ರಕಟವಾಗುವಲ್ಲಿ ಪ್ರಥಮ ಸ್ಥಾನದಲ್ಲಿದೆ. ಕನ್ನಡದಲ್ಲಿ ಬರೆಯುವವರ ಸಂಖ್ಯೆ ಹೆಚ್ಚಾಗಿದೆ. ಆ ನಿಟ್ಟಿನಲ್ಲಿ ಕನ್ನಡದ ಮಹತ್ವದ ಕೃತಿಗಳನ್ನಾದರೂ ಓದಬೇಕು. ಗ್ರಂಥಾಲಯದ ಪುಸ್ತಕ ಅಧ್ಯಯನ ಮಾಡಬೇಕು. ಇದರಿಂದ ಬದುಕನ್ನು ಗಟ್ಟಿಗೊಳಿಸಿಕೊಳ್ಳಬಹುದು ಎಂದು ಅವರು ವಿವರಿಸಿದರು. ‘ವಿದ್ಯಾರ್ಥಿಗಳು ಪಠ್ಯ ಪುಸ್ತಕ ಓದುವುದೇ ಕಡಿಮೆಯಾಗಿದೆ. ಪ್ರಶ್ನೆ ಪತ್ರಿಕೆಗಳನ್ನು ಅಧ್ಯಯನ ಮಾಡಿಕೊಂಡು ಪರೀಕ್ಷೆ ಬರೆಯುವವರ ಸಂಖ್ಯೆ ಹೆಚ್ಚಾಗಿದೆ. ಇಡೀ ಪುಸ್ತಕ ಅಧ್ಯಯನ ಮಾಡಿ ಪರೀಕ್ಷೆಗೆ ಉತ್ತರಿಸುವ ಛಾಪು ಬೆಳೆಸಿಕೊಳ್ಳಬೇಕು ಎಂದು ಅವರು ಪ್ರತಿಪಾದಿಸಿದರು.’
ರಾಷ್ಟ್ರಕವಿ ಕುವೆಂಪು ಅವರು ನಾಡಗೀತೆ ಬರೆದು 101 ವರ್ಷ ಆಗಿದೆ. ಆನರ್ಸ್ ಅಧ್ಯಯನ ಮಾಡುವಾಗ ನಾಡಗೀತೆಯನ್ನು ಬರೆದಿದ್ದಾರೆ ತಿಳಿಸಿದರು. ಕನ್ನಡ ಸಾಹಿತ್ಯ ಪರಿಷತ್ತು ಮೈಸೂರು ಜಿಲ್ಲಾ ಘಟಕದ ಅಧ್ಯಕ್ಷರಾದ ಮಡ್ಡಿಕೆರೆ ಗೋಪಾಲ ಅವರು ಮಾತನಾಡಿ ಕನ್ನಡ ಸಾಹಿತ್ಯ ಲೋಕದಲ್ಲಿ ನಿಸ್ಸಾರ್ ಅಹಮದ್ ಅವರು ಶಿವಮೊಗ್ಗದ ‘ಜೋಗದ ಸಿರಿ’ ಬಗ್ಗೆ ವರ್ಣಿಸಿದಂತೆ ಪಂಜೆ ಮಂಗೇಶರಾಯರು ‘ಎಲ್ಲಿ ಭೂರಮೆ...’ ಎಂದು ಬರೆಯುವ ಮೂಲಕ ಕೊಡಗಿನ ಶ್ರೀಮಂತಿಕೆ ಬಗ್ಗೆ ಕಣ್ಣಿಗೆ ಕಟ್ಟುವಂತೆ ವರ್ಣಿಸಿದ್ದಾರೆ ಎಂದರು. ಕನ್ನಡ ಸಾಹಿತ್ಯದಲ್ಲಿ ಮೊಟ್ಟಮೊದಲ ಬಾರಿಗೆ ಸಣ್ಣ ಕಥೆಗಳನ್ನು ರಚಿಸಿದ ಅವರು ‘ಕವಿಶಿಷ್ಯ’ ಕಾವ್ಯನಾಮದಿಂದ ಖ್ಯಾತರಾಗಿದ್ದು, ಕನ್ನಡ ಭಾಷೆಯ ಅಧ್ಯಾಪಕರಾಗಿ, ಶಾಲಾ ಇನ್ಸ್ಪೆಕ್ಟರಾಗಿ, ಟ್ರೈನಿಂಗ್ ಶಾಲೆಯ ಅಧ್ಯಾಪಕರಾಗಿ, ಪರೀಕ್ಷಾಧಿಕಾರಿ ಆಗಿ ಕರ್ತವ್ಯ ನಿರ್ವಹಿಸಿದ್ದಾರೆ ಎಂದರು.
ಇಬ್ಬರ ಬಲಿ ಪಡೆದಿದ್ದ ವೇದ ಹೆಸರಿನ ಪುಂಡಾನೆ ಸೆರೆ: ದುಬಾರೆ ಸಾಕಾನೆ ಶಿಬಿರದ ಕ್ರಾಲ್ನಲ್ಲಿ ಸನ್ನಡತೆಯ ಪಾಠ!
‘ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಮಹೇಶ್ ನಾಚಯ್ಯ ಅವರು ಮಾತನಾಡಿದರು. ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷರಾದ ಕೇಶವ ಕಾಮತ್ ಅವರು ಮಾತನಾಡಿ ಪಂಜೆ ಮಂಗೇಶರಾಯರು ಶಿಶು ಸಾಹಿತ್ಯದ ಜನಕ, ಪುತ್ತರಿ ಹಾಡಿನ ಪಿತಾಮಹ ಎಂದರು. ಇದೇ ವೇಳೆ ಸಾಹಿತಿ ಜಲಜಾ ಶೇಖರ್ ಅವರು ಬರೆದಿರುವ ‘ಅಗ್ನಿಕುಂಡ’ ಕಥಾ ಸಂಕಲನ ಪುಸ್ತಕವನ್ನು ಮಲ್ಲೇಶ್ ಗೌಡ ಅವರು ಬಿಡುಗಡೆ ಮಾಡಿದರು. ಹಾಗೆಯೇ ಉಳುವಂಗಡ ಕಾವೇರಿ ಅವರು ಬರೆದಿರುವ ಪುಸ್ತಕವನ್ನು ಟಿ.ಪಿ.ರಮೇಶ್ ಅವರು ಬಿಡುಗಡೆ ಮಾಡಿದರು. ಕಾವ್ಯಗುಚ್ಛ ಗಾಯನ ಮೂಲಕ ಚಿತ್ರಕಲಾ ಶಿಕ್ಷಕರಾದ ಬಿ.ಆರ್.ಸತೀಶ್ ಮತ್ತು ಹಿನ್ನೆಲೆ ಗಾಯಕರಾದ ಮೋಹನ್ ಚಿತ್ರಕಲೆ ಬಿಡಿಸಿದರು.
