ಬೆಳ್ಳಂಬೆಳಗ್ಗೆಯೇ ಗಜರಾಜ ದಾದಾಗಿರಿಗೆ ಜನರು ಅವಾಕ್ಕಾಗಿದ್ದು ಎದುರಿಗೆ ಬಂದ ಕೆಎಸ್ಆರ್‌ಟಿ ಬಸ್, ಟಾಟಾ ಏಸ್ ವಾಹನವನ್ನು ಹಿಮ್ಮೆಟ್ಟಿಸಿ ಓಡಿಸಿದೆ. ಕಳೆದ ಎರಡು ತಿಂಗಳಿನಿಂದಲೂ ಪೋಡುಗಳತ್ತ ಈ ಆನೆ ಧಾವಿಸುತ್ತಿದೆ ಎಂದು ತಿಳಿದುಬಂದಿದೆ‌. 

ಚಾಮರಾಜನಗರ(ಜೂ.13): ರಾಜ್ಯದ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಒಂದಾದ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಇಂದು(ಗುರುವಾರ) ಬೆಳ್ಳಂಬೆಳಗ್ಗೆ ಆನೆ ಓಡಾಡಿ ಜನರನ್ನು ಆತಂಕಕ್ಕೆ ಈಡು ಮಾಡಿರುವ ಘಟನೆ ನಡೆದಿದೆ‌‌‌. 

Add Asianetnews Kannada as a Preferred SourcegooglePreferred

ಬಿಳಿಗಿರಿರಂಗನ ಬೆಟ್ಟದ ಮುಖ್ಯರಸ್ತೆ, ಬಂಗಲೆ ಪೋಡಿನ ನಡುವೆ ನೀಳದಂತದ ಕಾಡಾನೆಯೊಂದು ಓಡಾಡಿದೆ. ಹೀಗಾಗಿ ಅಲ್ಲಿನ ಜನರನ್ನು, ಭಕ್ತರನ್ನು ಪರದಾಡುವಂತೆ ಮಾಡಿದೆ.

ಚಾಮರಾಜನಗರ: ಇನ್ನೋವಾ ಕಾರು ಡಿಕ್ಕಿ, ಕಾಡು ನಾಯಿ, ಜಿಂಕೆ ಸಾವು

ಬೆಳ್ಳಂಬೆಳಗ್ಗೆಯೇ ಗಜರಾಜ ದಾದಾಗಿರಿಗೆ ಜನರು ಅವಾಕ್ಕಾಗಿದ್ದು ಎದುರಿಗೆ ಬಂದ ಕೆಎಸ್ಆರ್‌ಟಿ ಬಸ್, ಟಾಟಾ ಏಸ್ ವಾಹನವನ್ನು ಹಿಮ್ಮೆಟ್ಟಿಸಿ ಓಡಿಸಿದೆ. ಕಳೆದ ಎರಡು ತಿಂಗಳಿನಿಂದಲೂ ಪೋಡುಗಳತ್ತ ಈ ಆನೆ ಧಾವಿಸುತ್ತಿದೆ ಎಂದು ತಿಳಿದುಬಂದಿದೆ‌. ಮಾವಿನ ಹಣ್ಣು‌ ಹಾಗೂ ಹಲಸಿನ ಹಣ್ಣಿಗಾಗಿ ಪೋಡುಗಳತ್ತ ಆನೆ ಬರುತ್ತಿದೆ ಎನ್ನಲಾಗಿದೆ.