ಪ್ರವಾಹದಿಂದ ಜಮೀನುಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮರಳು ಶೇಖರಣೆಯಾಗಿದ್ದು, ಹೀಗೆ ಸಂಗ್ರಹವಾದ ಮರಳನ್ನು ಮಾರಾಟ ಮಾಡಬಹುದ ಎಂದು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಹೇಳಿದ್ದಾರೆ. ಸರ್ಕಾರಕ್ಕೆ ನಿಗದಿತ ರಾಜಧನ ಪಾವತಿಸಿ ಅನುಮತಿ ಪಡೆಯಬೇಕೆಂದು ಹೇಳಿರುವ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಈ ಸಂಬಂಧ ಆದೇಶ ಹೊರಬಿದ್ದಿದೆ ಎಂದಿದ್ದಾರೆ.
ಚಿಕ್ಕಮಗಳೂರು(ಸೆ.10): ಪ್ರವಾಹದಿಂದ ಜಮೀನುಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮರಳು ಶೇಖರಣೆಯಾಗಿದ್ದು, ಹೀಗೆ ಸಂಗ್ರಹವಾದ ಮರಳನ್ನು ಮಾರಾಟ ಮಾಡಬಹುದ ಎಂದು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಹೇಳಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಭೂ ಕುಸಿತ ಹಾಗೂ ನಿರಂತರ ಮಳೆಯಿಂದ ಕೆಲವು ಕಡೆ ಕೃಷಿ ಭೂಮಿಯ ಮೇಲೆ ಬಂದು ನಿಂತಿರುವ ಮರಳನ್ನು ಮಾರಿಕೊಳ್ಳಲು ಆ ಜಮೀನಿನ ಮಾಲೀಕರಿಗೆ ಅನುಮತಿ ನೀಡಲಾಗಿದೆ. ಆದರೆ ಅವರು ಸರ್ಕಾರಕ್ಕೆ ನಿಗದಿತ ರಾಜಧನ ಪಾವತಿಸಿ ಅನುಮತಿ ಪಡೆಯಬೇಕೆಂದು ಹೇಳಿರುವ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಈ ಸಂಬಂಧ ಆದೇಶ ಹೊರಬಿದ್ದಿದೆ ಎಂದರು.
ಸಂತ್ರಸ್ತರ ಪುನರ್ವಸತಿಗೆ 249 ಎಕರೆ ಭೂಮಿ ಗುರುತು
ಚಾರ್ಮಾಡಿ ಘಾಟಿ ರಸ್ತೆಯಲ್ಲಿ ವಾಹನ ಓಡಾಟಕ್ಕೆ ಅನುಮತಿ ನೀಡುವುದು ಇನ್ನಷ್ಟುವಿಳಂಬವಾಗಲಿದೆ. ಮಳೆ ಬರುತ್ತಲೆ ಇರುವುದರಿಂದ ಅಲ್ಲಲ್ಲಿ ಕುಸಿತ ಉಂಟಾಗುತ್ತಿರು ವುದರಿಂದ ವಾಹನ ಓಡಾಟಕ್ಕೆ ಅನುಮತಿ ನೀಡುವುದು ಸದ್ಯಕ್ಕೆ ಸಾಧ್ಯವಿಲ್ಲವೆಂದು ಹೇಳಿದರು.
