Asianet Suvarna News Asianet Suvarna News

ಮತದಾರರು ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ ಹಕ್ಕ ಚಲಾಯಿಸಿ : ಡಾ.ಕೆ.ವಿ. ರಾಜೇಂದ್ರ ಕರೆ

ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಏ.26 ರಂದು ಚುನಾವಣಾ ಮತದಾನ ನಡೆಯಲಿದ್ದು, ಮತದಾರರು ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ ಪ್ರತಿಯೊಬ್ಬರೂ ಮತ ಹಾಕುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯಾದ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಕರೆ ನೀಡಿದರು.

People Vote without being lured by any desire: Dr. K.V. Rajendra  snr
Author
First Published Mar 21, 2024, 10:31 AM IST

  ಮೈಸೂರು ;  ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಏ.26 ರಂದು ಚುನಾವಣಾ ಮತದಾನ ನಡೆಯಲಿದ್ದು, ಮತದಾರರು ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ ಪ್ರತಿಯೊಬ್ಬರೂ ಮತ ಹಾಕುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯಾದ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಕರೆ ನೀಡಿದರು.

ನಗರದ ಅರಮನೆಯ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ಮೈಸೂರು ಮಹಾನಗರ ಪಾಲಿಕೆ ಸಂಯುಕ್ತವಾಗಿ ಬುಧವಾರ ಆಯೋಜಿಸಿದ್ದ ಮತದಾನ ಜಾಗೃತಿ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಮಾತನಾಡಿದರು.

ಮತದಾನ ಎಂಬುದು ಹಬ್ಬವಿದ್ದಂತೆ ಅದರಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು. ಈಗಾಗಲೇ ಲೋಕಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮತದಾನ ಕೇಂದ್ರಗಳು ಸಿದ್ಧವಾಗಿದ್ದು, ಇವಿಎಂಗಳನ್ನು ರಾಂಡಮೈಸೇಶನ್ ಮಾಡಿ ಪ್ರತಿಯೊಂದು ಅಸೆಂಬ್ಲಿ ವಿಭಾಗದ ಸ್ಟ್ರಾಂಗ್ ರೂಂಗೆ ಕಳುಹಿಸಿಕೊಡಲಾಗಿದೆ ಎಂದರು.

ಮೈಸೂರು- ಕೊಡಗು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮತದಾನದ ದಿನಾಂಕವನ್ನು ತಿಳಿಸಿ, ಜನರನ್ನು ಆಕರ್ಷಸಿವುದು ಈ ಕಾರ್ಯಕ್ರಮದ ಉದ್ದೇಶವಾಗಿದ್ದು, ಮುಂದಿನ ದಿನಗಳಲ್ಲಿ ಜನರಿಗೆ ಜಿಲ್ಲೆಯಾದ್ಯಂತ ಕಾರ್ಯಕ್ರಮ ಆಯೋಜಿಸಿ, ಜನರಲ್ಲಿ ಅರಿವು ಮೂಡಿಸಲಾಗಿತ್ತದೆ ಎಂದು ಅವರು ತಿಳಿಸಿದರು.

ಜಿಲ್ಲೆಯಾದ್ಯಂತ 2915 ಮತದಾನ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ಅದರಲ್ಲಿ ಕಡಿಮೆ ಮತದಾನ ಆಗುತ್ತಿರುವ ಸ್ಥಳವನ್ನು ಗುರುತಿಸಿ ಅಲ್ಲಿ ಸ್ವೀಪ್ ಚಟುವಟಿಕೆಗಳನ್ನು ನಡೆಸಲು ಯೋಚನೆ ಮಾಡಲಾಗಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಶೇ.70 ರಷ್ಟು ಮತದಾನವಾಗಿದ್ದು, ಈ ಬಾರಿ ಶೇ.75 ರಷ್ಟು ದಾಟಿಸುವ ನಿರೀಕ್ಷೆ ಇದೆ ಎಂದರು.

ಜಿಪಂ ಸಿಇಒ ಕೆ.ಎಂ. ಗಾಯತ್ರಿ, ನಗರ ಪಾಲಿಕೆ ಆಯುಕ್ತೆ ಡಾ. ಮಧು, ಡಿಸಿಪಿ ಎಂ. ಮುತ್ತುರಾಜು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

Follow Us:
Download App:
  • android
  • ios