ಪುತ್ಥಳಿ ವಿಚಾರ ಇದೀಗ ಹೆಚ್ಚು ಸದ್ದಾಗುತ್ತಿದೆ. ಬೆಳಗಾವಿಯ ಸುವರ್ಣ ಸೌಧದ ಎದುರು ಚನ್ನಮ್ಮ ಪುತ್ಥಳಿ ಸ್ಥಾಪನೆ ಮಾಡಬೇಕು ಎಂದು ಜನರು ಆಗ್ರಹಿಸಿದ್ದಾರೆ.
ಬೆಳಗಾವಿ (ಸೆ.07): ಪೀರನವಾಡಿ ಆಯ್ತು, ಈಗ ಸುವರ್ಣ ವಿಧಾನಸೌಧದ ಎದುರು ವೀರರಾಣಿ ಕಿತ್ತೂರು ಚನ್ನಮ್ಮ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪಿಸುವಂತೆ ಆಗ್ರಹಿಸಿ ಭಾನುವಾರ ‘ಸಂಕಲ್ಪ ಯಾತ್ರೆ’ ನಡೆಸಲಾಯಿತು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಜಿಲ್ಲೆಯ ಮೂಡಲಗಿಯ ಶ್ರೀಮಂತ ಶಿವಯೋಗಿ ಮಹಾರಾಜರ ನೇತೃತ್ವದಲ್ಲಿ ಮೂಡಲಗಿ ಪಟ್ಟಣದಿಂದ ಆರಂಭವಾದ ಸಂಕಲ್ಪ ಯಾತ್ರೆ ಬೆಳಗಾವಿ ನಗರದ ಚನ್ನಮ್ಮ ವೃತ್ತಕ್ಕೆ ಬಂದು ತಲುಪಿತು. ಅಲ್ಲಿ ಪ್ರತಿಭಟಿಸಿ, ಪೀರನವಾಡಿಯತ್ತ ತೆರಳಿತು.
ರಾಯಣ್ಣನ ಪ್ರತಿಮೆ ಸ್ಥಳಕ್ಕೆ ಶಿವಾಜಿ ಚೌಕ ನಾಮಕರಣ .
ಬೆಳಗಾವಿ ಸುವರ್ಣಸೌಧದ ಎದುರು ವೀರರಾಣಿ ಕಿತ್ತೂರು ಚನ್ನಮ್ಮ ಮತ್ತು ಶೂರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪಿಸುವಂತೆ ಆಗ್ರಹಿಸಲಾಯಿತು.
ಮೂಡಲಗಿಯ ಶ್ರೀಮಂತ ಶಿವಯೋಗಿ ಮಹಾರಾಜರು ಸೇರಿ ಹಲವು ಗಣ್ಯರು, ವಿವಿಧ ಕನ್ನಡಪರ ಸಂಘಟನೆಗಳು ಪಾಲ್ಗೊಂಡಿದ್ದವು.
