ಆಸ್ಪತ್ರೆಯಲ್ಲಿ ದಾಖಲು ಮಾಡಿಕೊಳ್ಳುತ್ತಿಲ್ಲ ಎಂದು ಸಮೇತ ಜಿಲ್ಲಾಡಳಿತ ಕಚೇರಿಗೆ ಆಗಮಿಸಿದ್ದ ಮೃತ ರೋಗಿ ಕುಟುಂಬ| ರೋಗಿಯ ಸ್ಥಿತಿ ನೋಡಿ ತಕ್ಷಣ ಜಿಲ್ಲಾಸ್ಪತ್ರೆ ವೈದ್ಯರಿಗೆ ದಾಖಲು ಮಾಡಿಕೊಂಡು ಚಿಕಿತ್ಸೆ ನೀಡುವಂತೆ ಸೂಚಿ​ಸಿ​ದ್ದ ಡಿಸಿ ಪಾಟೀಲ| ಶುಕ್ರವಾರ ರಾತ್ರಿ ಹೃದಯಾಘಾತದಿಂದ ಮೃತಪಟ್ಟ ರೋಗಿ| 

ವಿಜಯಪುರ(ಜು.12): ಆಸ್ಪತ್ರೆಗೆ ದಾಖಲಾಗಲು ಪರದಾಡಿದ್ದ ಸಿಂದಗಿ ತಾಲೂಕಿನ ಮಲಘಾಣ ಗ್ರಾಮದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೇ ಜಿಲ್ಲಾಸ್ಪತ್ರೆಯಲ್ಲಿ ಶುಕ್ರವಾರ ತಡರಾತ್ರಿ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ತಿಳಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆಸ್ಪತ್ರೆಯಲ್ಲಿ ದಾಖಲು ಮಾಡಿಕೊಳ್ಳುತ್ತಿಲ್ಲ ಎಂದು ಈ ರೋಗಿ ಕುಟುಂಬ ಸಮೇತ ಜಿಲ್ಲಾಡಳಿತ ಕಚೇರಿಗೆ ಆಗಮಿಸಿದ್ದರು. ಆಗ ಡಿಸಿ ಪಾಟೀಲ ರೋಗಿಯ ಸ್ಥಿತಿ ನೋಡಿ ತಕ್ಷಣ ಜಿಲ್ಲಾಸ್ಪತ್ರೆ ವೈದ್ಯರಿಗೆ ದಾಖಲು ಮಾಡಿಕೊಂಡು ಚಿಕಿತ್ಸೆ ನೀಡುವಂತೆ ಸೂಚಿ​ಸಿ​ದ್ದರು. ಆದರೆ ಶುಕ್ರವಾರ ರಾತ್ರಿ ಈ ರೋಗಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈತನ ಸ್ವ್ಯಾಬ್‌ ಮಾದರಿ ಸಂಗ್ರಹಿಸಿ ಪರೀಕ್ಷೆ ನಡೆಸಲಾಗಿತ್ತು. ಆತನ ಪರೀಕ್ಷೆ ವರದಿಯಲ್ಲಿ ನೆಗೆಟಿವ್‌ ಬಂದಿದೆ ಎಂದು ಡಿಸಿ ತಿಳಿಸಿದ್ದಾರೆ.

'ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣದಿಂದ ಬೇಸತ್ತು ಕಾಂಗ್ರೆಸ್‌ಗೆ ಬೆಂಬಲ'

ಎಸ್ಪಿ ಹೋಂ ಕ್ವಾರಂಟೈನ್‌:

ಎಸ್ಪಿ ಅನುಪಮ ಅಗರವಾಲ್‌ ಅವರು ಸ್ವಯಂ ಪ್ರೇರಿತರಾಗಿ ಮೂರು ದಿನಗಳ ಕಾಲ ಹೋಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ ಎಂದು ಡಿಸಿ ಪಾಟೀಲ ತಿಳಿಸಿದ್ದಾರೆ. ಶುಕ್ರವಾರವಷ್ಟೇ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿಯ ಎಎಸೈಗೆ ಪಾಸಿಟಿವ್‌ ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಎಸ್ಪಿ ಕಚೇರಿಯನ್ನು ತಾತ್ಕಾಲಿಕವಾಗಿ ಸೀಲ್‌ಡೌನ್‌ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಎಸ್ಪಿ ಕೂಡ ಸ್ವಯಂ ಪ್ರೇರಿತರಾಗಿ 3 ದಿನಗಳ ಕಾಲ ಹೋಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ ಎಂದು ತಿಳಿಸಿದರು.