ತಂದೆಯ ಅಸ್ತಿ ಬಿಡಲು ಹೋದ ಮಗ ಕಾಲು ಜಾರಿ ನದಿಗೆ ಬಿದ್ದು ಸಾವು|ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಚೊಳಚಗುಡ್ಡ ಗ್ರಾಮದ ಬಳಿ ನಡೆದ ಘಟನೆ| ಮೃತನನ್ನು ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ನಿವಾಸಿ ಎಂದು ತಿಳಿದು ಬಂದಿದೆ| ಈ ಸಂಬಂಧ ಬಾದಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು|
ಬಾಗಲಕೋಟೆ(ಅ.29): ತಂದೆಯ ಅಸ್ತಿ ಬಿಡಲು ಹೋದ ಮಗ ಕಾಲು ಜಾರಿ ನದಿಗೆ ಬಿದ್ದು ಮೃತಪಟ್ಟ ದುರ್ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಚೊಳಚಗುಡ್ಡ ಗ್ರಾಮದ ಬಳಿಯ ಮಲಪ್ರಭಾ ನದಿಯಲ್ಲಿ ಬುಧವಾರ ಸಂಭವಿಸಿದೆ.
Add Asianetnews Kannada as a Preferred Source

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ನಿವಾಸಿ ಮಹಾಂತೇಶ ಯಾದವ (45) ಮೃತ ವ್ಯಕ್ತಿ. ಮಲಪ್ರಭಾ ನದಿಯಲ್ಲಿ ಅಸ್ತಿ ಬಿಡಲು ಬಂದಿದ್ದ ವೇಳೆ ಈ ಅವಘಡ ಸಂಭವಿಸಿದೆ.
ಇಳಕಲ್ಲನಲ್ಲಿ ಪಿಗ್ಮಿ ಸಂಗ್ರಹಕಾರನ ಕೊಲೆ: ಕಾರಣ..?
ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ನದಿಯಲ್ಲಿನ ಶವ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಬಾದಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
