Asianet Suvarna News Asianet Suvarna News

ನರೇಂದ್ರ ಮೋದಿ ಆಹ್ವಾನದ ಮೇರೆಗೆ ದೆಹಲಿಯತ್ತ ಪೇಜಾವರ ಶ್ರೀಗಳು

ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನಕ್ಕೆ ಪೇಜಾವರ ಶ್ರೀಗಳಿಗೆ ಆಹ್ವಾನ|| ಪೇಜಾವರ ಮಠದ ವಿಶ್ವೇಶ ತೀರ್ಥರಿಗೆ ಪ್ರಧಾನಿ ಕಚೇರಿಯಿಂದ ಆಹ್ವಾನ| ಮಂಗಳೂರಿಂದ ಇಂದೇ ದೆಹಲಿಗೆ ತೆರಳಲಿರುವ ಪೇಜಾವರ ಸ್ವಾಮೀಜಿ|

PM Modi Invites Udupi  Vishweshateertha Swamiji  To His Swearing-In Ceremony
Author
Bengaluru, First Published May 29, 2019, 3:54 PM IST

ಉಡುಪಿ, (ಮೇ.28): ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮಕ್ಕೆ  ಉಡುಪಿಯ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಆಹ್ವಾನ ಬಂದಿದೆ. 

ನಾಳೆ ಅಂದರೆ ಮೇ 30 ರಂದು ನರೇಂದ್ರ ಮೋದಿ  ಅವರು 2ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಈ ಕಾರ್ಯಕ್ರಮಕ್ಕೆ ಪ್ರಧಾನಿ ಕಚೇರಿಯಿಂದ ಪೆಜಾವರ ಶ್ರೀಗಳಿಗೆ ಆಹ್ವಾನ ಬಂದಿದೆ.

ಸಿಎಂ ಎಚ್.ಡಿ ಕುಮಾರಸ್ವಾಮಿಗೆ ನರೇಂದ್ರ ಮೋದಿ ಆಹ್ವಾನ

ಈ ಹಿನ್ನೆಲೆಯಲ್ಲಿ ವಿಶ್ವೇಶತೀರ್ಥ ಸ್ವಾಮೀಜಿ ಇಂದು (ಬುಧವಾರ) ಮಂಗಳೂರು ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಲಿದ್ದಾರೆ. ಇನ್ನು ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಗೂ ಆಹ್ವಾನ ಬಂದಿದ್ದು, ಗುರುವಾರ ಬೆಳಗ್ಗೆ 11.30ಕ್ಕೆ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಲಿದ್ದಾರೆ..

ಗುರುವಾರ ಸಂಜೆ 7 ಗಂಟೆಗೆ ರಾಷ್ಟ್ರಪತಿ ಭವನ ಮುಂಭಾಗ  ನರೇಂದ್ರ ಮೋದಿ ಅವರು ಪ್ರತಿಜ್ಞೆ ಸ್ವೀಕಾರ ಮಾಡಲಿದ್ಧಾರೆ. ಈ ಬಾರಿ ದರ್ಬಾರ್​ ಹಾಲ್​ ಬದಲು ಫೋರ್​ಕೋರ್ಟ್​ನಲ್ಲಿ ಸಮಾರಂಭ ನಡೆಯಲಿದೆ.

ಈ ಕಾರ್ಯಕ್ರಮಕ್ಕೆ ದೇಶ-ವಿದೇಶದ ಸುಮಾರು 6,500 ಗಣ್ಯ ಅತಿಥಿಗಳ ಹಾಜರಾಗುವ ಸಾಧ್ಯತೆ ಇದೆ. 

Follow Us:
Download App:
  • android
  • ios