Asianet Suvarna News Asianet Suvarna News

ಪೊಲೀಸರ ಮೇಲೆಯೇ ಮಾರಕಾಸ್ತ್ರದಿಂದ ಹಲ್ಲೆ: ಆರೋಪಿ ಮೇಲೆ ಫೈರಿಂಗ್‌

ಡಬಲ್ ಮರ್ಡರ್ ಆರೋಪಿ ಮೇಲೆ ಪೊಲೀಸರ ಫೈರಿಂಗ್| ಬೆಂಗಳೂರಿನಲ್ಲಿ ಕೊಲೆ ಆರೋಪಿ ಕಾಲಿಗೆ ಗುಂಡೇಟು| ಸಂಜಯ್ ಅಲಿಯಾಸ್ ಚಿಕ್ಕಪ್ಪಿ ಕಾಲಿಗೆ ಗುಂಡು| ಕುಮಾರಸ್ವಾಮಿ ಲೇಔಟ್ ನ ದೇವರ ಕೆರೆ ಬಳಿ ಘಟನೆ|
 
Police Firing on the accused in Bengaluru
Author
Bengaluru, First Published Apr 16, 2020, 10:27 AM IST
ಬೆಂಗಳೂರು(ಏ.16): ಡಬಲ್ ಮರ್ಡರ್ ಆರೋಪಿಯನ್ನ ಬಂಧಿಸಲು ಹೋದ ಸಂದರ್ಭದಲ್ಲಿ ಪೊಲೀಸರ ಮೇಲೆಯೇ ಆರೋಪಿ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ ಘಟನೆ ಕುಮಾರಸ್ವಾಮಿ ಲೇಔಟ್‌ನ ದೇವರ ಕೆರೆ ಬಳಿ ನಡೆದಿದೆ. ಈ ವೇಲೆ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿ ಮೇಲೆ ಫೈರಿಂಗ್ ನಡೆಸಿದ್ದಾರೆ. 

ಈ ವೇಳೆ ಆರೋಪಿ ಸಂಜಯ್ ಅಲಿಯಾಸ್ ಚಿಕ್ಕಪ್ಪಿ ಕಾಲಿಗೆ ಗುಂಡು ತಗುಲಿದೆ.  ಮೊನ್ನೆಯಷ್ಟೆ ಸಂಜಯ್ ಅಲಿಯಾಸ್ ಚಿಕ್ಕಪ್ಪಿ ಸುಬ್ರಮಣ್ಯಪುರ ಠಾಣಾ ವ್ಯಾಪ್ತಿಯಲ್ಲಿ ಡಬಲ್ ಮರ್ಡರ್ ಮಾಡಿದ್ದ ಆರೋಪಿಯಾಗಿದ್ದಾನೆ. ಆರೋಪಿ ಸುಳಿವಿನ ಮೆರೆಗೆ ಪೊಲೀಸರು ಬಂಧಿಸಲು ಹೋಗಿದ್ದರು. ಈ ವೇಳೆ ಸುಬ್ರಮಣ್ಯ ಪುರ ಠಾಣೆಯ ಸಬ್ ಇನ್ಸ್‌ಪೆಕ್ಟರ್‌ ಮಧು ಅವರ ಮೇಲೆ ಸಂಜಯ್ ಅಲಿಯಾಸ್ ಚಿಕ್ಕಪ್ಪಿ ಮಾರಕಾಸ್ತ್ರದಿಂದ ಹಲ್ಲೆ ಮಾಡಲು ಮುಂದಾಗಿದ್ದನು. 

ಬೆಳಗಾವಿ: ಸಾರ್ವಜನಿಕ ಪ್ರದೇಶದಲ್ಲಿ ಪೊಲೀ​ಸರ ಮುಂದೆಯೇ ಫೈರಿಂಗ್..!

ಆಗ ಕೋಣನಕುಂಟೆ ಇನ್ಸ್‌ಪೆಕ್ಟರ್‌ ಧರ್ಮೇಂದ್ರ ಅವರು ಆತ್ಮರಕ್ಷಣೆಗಾಗಿ ಆರೋಪಿ ಮೇಲೆ ಫೈರಿಂಗ್ ಮಾಡಿದ್ದಾರೆ. ಇದೇ ಏಪ್ರಿಲ್ 12 ರಂದು ರೌಡಿ ಮುಕುಂದ @ ಕರಿಹಂದಿ ಹಾಗೂ ಮನೋಜ್‌ನನ್ನು ಸಂಜಯ್ ಮತ್ತು ಅವನ ತಂಡ ಹತ್ಯೆಗೈದಿದ್ದರು ಎಂದು ಆರೋಪಿಸಲಾಗಿದೆ. ಅದೃಷ್ಟವಷಾತ್‌ ಪೊಲೀಸ್‌ ಅಧಿಕಾರಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
 
Follow Us:
Download App:
  • android
  • ios