ವಿದ್ಯಾರ್ಥಿಗಳ ಮೇಲೆ ಪುಂಡಾಟಿಕೆ ಮಾಡುತ್ತಿದ್ದ ವಿದ್ಯಾರ್ಥಿ| ಗದಗ ನಗರದ ಪಂಡಿತ ಪುಟ್ಟರಾಜ ಗವಾಯಿಗಳು ಬಸ್‌ ನಿಲ್ದಾಣದಲ್ಲಿ ನಡೆದ ಘಟನೆ| ಸಾರಿಗೆ ಸಂಸ್ಥೆಯ ಸಿಬ್ಬಂದಿಗೆ ಅವಾಜ್‌ ಹಾಕಿದ ವಿದ್ಯಾರ್ಥಿ| 

ಗದಗ(ಫೆ.14): ಗದುಗಿನ ಪಂಡಿತ ಪುಟ್ಟರಾಜ ಗವಾಯಿಗಳು ಬಸ್‌ ನಿಲ್ದಾಣದಲ್ಲಿ ಪುಂಡಾಟಿಕೆ ನಡೆಸುತ್ತಿದ್ದ ವಿದ್ಯಾರ್ಥಿಗೆ ಪೊಲೀಸರು ಕಪಾಳಮೋಕ್ಷ ಮಾಡಿದ ಘಟನೆ ಶನಿವಾರ ನಡೆದಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬಸ್‌ ನಿಲ್ದಾಣದಲ್ಲಿ ಇತರ ವಿದ್ಯಾರ್ಥಿಗಳ ಮೇಲೆ ಪುಂಡಾಟಿಕೆ ಮಾಡುತ್ತಿದ್ದ ಓರ್ವ ವಿದ್ಯಾರ್ಥಿಯನ್ನು ಗಮನಿಸಿದ ಸಾರಿಗೆ ಸಂಸ್ಥೆಯ ನೌಕರರು ಪ್ರಶ್ನೆ ಮಾಡಿದ್ದಾರೆ. ಆದರೆ ಪುಂಡ ವಿದ್ಯಾರ್ಥಿ ಸಾರಿಗೆ ಸಂಸ್ಥೆಯ ಸಿಬ್ಬಂದಿಗೆ ಅವಾಜ್‌ ಹಾಕಿದ್ದಾನೆ. 

ಹೈವೇಯಲ್ಲಿ ಕೆಟ್ಟುನಿಂತ ಲಾರಿಗೆ ಇನ್ನೊಂದು ಲಾರಿ ಡಿಕ್ಕಿ: ಇಬ್ಬರು ಸಾವು

ಇದಾದ ಬಳಿಕ ಸ್ಥಳೀಯ ಪೊಲೀಸರಿಂದ ಕಪಾಳಮೋಕ್ಷವಾಗಿದ್ದು, ಕಪಾಳಕ್ಕೆ ಭಾರಿಸಿದ ಕೂಡಲೇ ಪುಂಡ ವಿದ್ಯಾರ್ಥಿ ಸ್ಥಳದಿಂದ ಕಾಲ್ಕಿತ್ತಿದ್ದಾನೆ.