ಮಹಾಮಾರಿ ಕೊರೋನಾದಿಂದ ರಕ್ಷಿಸಿಕೊಳ್ಳಲು ಹೊಸ ಪ್ರಯೋಗಕ್ಕೆ ಕೈ ಹಾಕಿದ ಪೊಲೀಸರು| ಠಾಣಾ ಆವರಣದಲ್ಲೇ ಪೆಂಡಾಲ್ ಹಾಕಿ ಕೊಠಡಿ ನಿರ್ಮಿಸಿ ಅಲ್ಲಿಯೇ ಸಾರ್ವಜನಿಕರ ಅಹವಾಲು ಸ್ವೀಕರಿಸಲು ಮುಂದಾದ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ಪೊಲೀಸರು|
ಚಡಚಣ(ಜೂ.29): ಕೊರೋನಾ ಸೋಂಕಿನಿಂದ ಪಾರಾಗಲು ವಿಜಯಪುರ ಜಿಲ್ಲೆಯ ಚಡಚಣ ಪೊಲೀಸ್ ಠಾಣೆ ಅಧಿಕಾರಿಗಳು ಠಾಣಾ ಆವರಣದಲ್ಲೇ ಪೆಂಡಾಲ್ ಹಾಕಿ ಕೊಠಡಿ ನಿರ್ಮಿಸಿ ಅಲ್ಲಿಯೇ ಸಾರ್ವಜನಿಕರ ಅಹವಾಲು ಸ್ವೀಕರಿಸಲು ಆರಂಭಿಸಿರುವ ವಿನೂತನ ಪ್ರಯೋಗಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
Add Asianetnews Kannada as a Preferred Source

ಕೊರೋನಾ ಸೋಂಕು ತಾಗಿ ಇಡೀ ಕಚೇರಿಯನ್ನೇ ಸೀಲ್ಡೌನ್ ಮಾಡುವುದು, ಸ್ಥಳಾಂತರಿಸಿರುವ ಪ್ರಕರಣ ಗಮನಿಸಿರುವ ಅಲ್ಲಿನ ಅಧಿಕಾರಿಗಳು ಜೂ. 27ರಂದು ಈ ಪ್ರಯೋಗಕ್ಕೆ ಕೈ ಹಾಕಿದ್ದಾರೆ.
ವಿಜಯಪುರ: ಮಾಜಿ ಶಾಸಕರಿಗೆ ಕೊರೋನಾ ಪಾಸಿಟಿವ್, ಮನೆ ಸುತ್ತ ಸೀಲ್ಡೌನ್
ಠಾಣೆಯಲ್ಲಿ ಕೊಠಡಿಗಳು ಸಣ್ಣ ಪ್ರಮಾಣದಲ್ಲಿದ್ದು ಸಾರ್ವಜನಿಕರಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ. ಈಗ ಸಾರ್ವಜನಿಕರಿಗೆ ಹಾಗೂ ಠಾಣಾ ಸಿಬ್ಬಂದಿಗೂ ಇದರಿಂದ ಅನುಕೂಲವಾಗಲಿದೆ. ಸಿಪಿಐ ಚಿದಂಬರ ಮಡಿವಾಳ ಮಾರ್ಗದರ್ಶನದಲ್ಲಿ ಈ ಪ್ರಯೋಗ ಮಾಡಲಾಗಿದೆ ಎಂದು ಪಿಎಸೈ ಸಿ.ಬಿ. ಬಾಗೇವಾಡಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
