ರಾಜ್ಯದಲ್ಲಿ ಲೋಕಸಭಾ ಉಪ ಚುಣಾವಣೆ ಸದ್ದು ಜೋರಾಗುತ್ತಿದ್ದು ಇದೇ ವೇಳೆ ಮುತಾಲಿಕ್ ಅವರು ಕೂಡ ಸ್ಪರ್ಧೆಯ ಇಂಗಿತ ವ್ಯಕ್ತಪಡಿಸಿದ್ದಾರೆ.
ವಿಜಯಪುರ (ಫೆ.28): ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಸ್ಪರ್ಧಿಸಲು ನನಗೆ ಬಿಜೆಪಿಯಿಂದ ಟಿಕೆಟ್ ನೀಡಬೇಕು ಎಂದು ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ ಮುತಾಲಿಕ್ ಮನವಿ ಮಾಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವ ಸುರೇಶ ಅಂಗಡಿ ಅವರ ನಿಧನದಿಂದ ತೆರವಾದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಇಚ್ಛೆ ಹೊಂದಿದ್ದು, ಈ ಸಂಬಂಧ ನಾನು ಈಗಾಗಲೇ ಬಿಜೆಪಿ ನಾಯಕರಿಗೆ ಮನವಿ ಮಾಡಿರುವುದಾಗಿ ತಿಳಿಸಿದರು.
ಬಾಬರ್ ಅನುಯಾಯಿಗಳಾದ PFI ಸಂಘಟನೆಯವರು ರಾಕ್ಷಸ ಕುಲದವರು: ಮುತಾಲಿಕ್ ...
ಇನ್ನು ಮೂರು ವರ್ಷ ಅವಧಿಯಲ್ಲಿ ನಾನು ಜನಸೇವೆ ಸಲ್ಲಿಸಲು ಬಯಸಿದ್ದು ಬಿಜೆಪಿ ಹೈಕಮಾಂಡ್ ನನಗೆ ಅವಕಾಶ ಕಲ್ಪಿಸಿ ಕೊಡಬೇಕು. ಒಂದು ವೇಳೆ ನನಗೆ ಅವಕಾಶ ಕೊಡದಿದ್ದರೂ ಬಿಜೆಪಿ ಅಭ್ಯರ್ಥಿ ಪರ ಕೆಲಸ ಮಾಡುತ್ತೇನೆ ಎಂದರು.
